ಹಿಂದೂ, ಬೌದ್ಧ, ಸಿಖ್ ಧರ್ಮದವರು ಮಾತ್ರ ಪರಿಶಿಷ್ಟ ಜಾತಿ ಹಕ್ಕು ಪಡೆಯಬಹುದು: ಸುಪ್ರೀಂ ಕೋರ್ಟ್

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನ್ಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಪಾಸ್ಟರ್ ಚಿಂತಾಡ ಆನಂದ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವ ವೇಳೆ ಈ ತೀರ್ಪು ನೀಡಿತು.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕೆ ಸೇರಿದ ವ್ಯಕ್ತಿಗಳಷ್ಟೇ ಪರಿಶಿಷ್ಟ ಜಾತಿ (Scheduled Caste) ಹುದ್ದೆಯ ಹಕ್ಕು ಕೇಳಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಇತರ ಯಾವುದೇ ಧರ್ಮಕ್ಕೆ ಮತಾಂತರವಾದಲ್ಲಿ, ಆ ಹುದ್ದೆ ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನ್ಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಪಾಸ್ಟರ್ ಚಿಂತಾಡ ಆನಂದ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವ ವೇಳೆ ಈ ತೀರ್ಪು ನೀಡಿತು. ಚಿಂತಾಡ ಆನಂದ ಅವರು ಅಕ್ಕಲ ರಾಮಿರೆಡ್ಡಿ ಸೇರಿದಂತೆ ಕೆಲವರಿಂದ ಜಾತಿ ಆಧಾರಿತ ಅವಹೇಳನ, ಟೀಕೆ ಮತ್ತು ಭೇದಭಾವ ಎದುರಿಸಿದ್ದಾಗಿ ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಸ್‌ಸಿ/ಎಸ್‌ಟಿ (ಅತ್ಯಾಚಾರ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು.

ಕಳೆದ ವರ್ಷ ಮೇ ತಿಂಗಳಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್ ತೀರ್ಪಿನಲ್ಲಿ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಕಾರಣದಿಂದ ಆನಂದ ಅವರಿಗೆ ಎಸ್‌ಸಿ ಹುದ್ದೆ ಅನ್ವಯಿಸುವುದಿಲ್ಲ ಹಾಗೂ ಈ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿ ಎಫ್‌ಐಆರ್ ರದ್ದುಗೊಳಿಸಲಾಗಿತ್ತು.

Supreme court
ಸುಪ್ರೀಂ ಕೋರ್ಟ್​ನಲ್ಲೂ ಪ್ರಜ್ವಲ್‌ಗೆ ಹಿನ್ನಡೆ; ಅತ್ಯಾಚಾರ ಪ್ರಕರಣ ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ!

ಹೈಕೋರ್ಟ್ ತೀರ್ಪನ್ನು ಸಮರ್ಥಿಸಿದ ಸುಪ್ರೀಂ ಕೋರ್ಟ್, ಜಾತಿ ಭೇದವನ್ನು ಗುರುತಿಸದ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ದಲಿತ ವ್ಯಕ್ತಿಯು ತನ್ನ ಎಸ್‌ಸಿ ಹುದ್ದೆಯನ್ನು ಕಳೆದುಕೊಳ್ಳುತ್ತಾನೆ ಎಂದು ತಿಳಿಸಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಅನುಸರಿಸದ ಯಾವುದೇ ವ್ಯಕ್ತಿಯನ್ನು ಅನುಸೂಚಿತ ಜಾತಿಯ ಸದಸ್ಯನೆಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com