

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಸರ್ವಪಕ್ಷ ಸಭೆ ಕರೆಯುವ ಕೇಂದ್ರದ ನಿರ್ಧಾರದ ಬಗ್ಗೆ ಬಿಜೆಪಿ ಮತ್ತು ವಿರೋಧ ಪಕ್ಷಗಳು ಬುಧವಾರ ತೀವ್ರ ವಾಗ್ವಾದ ನಡೆದಿದೆ.
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈಗ ಸರ್ವಪಕ್ಷ ಸಭೆ ಕರೆದಿರುವುದು ತೀವ್ರ ವಿಳಂಬವಾದ ಕ್ರಮ ಎಂದು ಟೀಕಿಸಿದ್ದು, ಸರ್ಕಾರದ ವಿದೇಶಾಂಗ ನೀತಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕ ಚರ್ಚೆಯಲ್ಲಿ ಏಕೆ ಭಾಗವಹಿಸುತ್ತಿಲ್ಲ ಎಂದು ಪ್ರಶ್ನಿಸಿವೆ. ಆದರೆ ಪ್ರತಿಪಕ್ಷಗಳು ಸೂಕ್ಷ್ಮ ವಿಷಯದಲ್ಲೂ ರಾಜಕೀಯ ಮಾಡುತ್ತಿವೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಸಂಜೆ ನಡೆಯುವ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗವಹಿಸುವ ನಿರೀಕ್ಷೆಯಿದೆ. ಪಶ್ಚಿಮ ಏಷ್ಯಾ ಪರಿಸ್ಥಿತಿಯ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ ನಂತರ ಈ ಸರ್ವಪಕ್ಷ ಸಭೆ ಕರೆಯಲಾಗಿದೆ.
ಸರ್ವಪಕ್ಷ ಸಭೆ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಪ್ರಮುಖ ಜಾಗತಿಕ ಬಿಕ್ಕಟ್ಟುಗಳ ಸಮಯದಲ್ಲಿ ಇಂತಹ ಚರ್ಚೆಗಳನ್ನು ಸಾಂಪ್ರದಾಯಿಕವಾಗಿ ಪ್ರಧಾನಿ ನೇತೃತ್ವ ವಹಿಸುತ್ತಾರೆ. ಆದರೆ ಮೋದಿ ಏಕೆ ಭಾಗವಹಿಸುತ್ತಿಲ್ಲ ಎಂದು ಪ್ರತಿಪಕ್ಷಗಳು ಪ್ರಶ್ನಿಸಿವೆ.
ಲೋಕಸಭೆಯಲ್ಲಿ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದ ಕಾಂಗ್ರೆಸ್ ಸಚೇತಕ ಮಾಣಿಕ್ಕಮ್ ಟ್ಯಾಗೋರ್ ಅವರು, ಇದು ರಾಜಿ ಮಾಡಿಕೊಂಡಂತೆ ಮತ್ತು ಬಾಹ್ಯ ಪ್ರಭಾವದ ವಿರುದ್ಧ ಎಚ್ಚರಿಕೆ ನೀಡುತ್ತಿರುವಂತೆ ತೋರುತ್ತಿದೆ ಎಂದು ಆರೋಪಿಸಿದರು.
"ಪಶ್ಚಿಮ ಏಷ್ಯಾ ವಿಷಯದ ಬಗ್ಗೆ, ಕಾಂಗ್ರೆಸ್ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದೆ. ಆದರೆ ಇದನ್ನು ಮೊದಲೇ ಮಾಡಬೇಕಿತ್ತು ಮತ್ತು ಪ್ರಧಾನ ಮಂತ್ರಿಗಳು ಸಭೆಯಲ್ಲಿ ಭಾಗವಹಿಸಬೇಕು. ಗಂಭೀರ ವಿಷಯಗಳ ಸಂದರ್ಭದಲ್ಲಿ ಅಂತಹ ಸಭೆಗಳು ನಡೆದಾಗಲೆಲ್ಲಾ, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಅಟಲ್ ಬಿಹಾರಿ ವಾಜಪೇಯಿ ಅಥವಾ ಪಿ.ವಿ. ನರಸಿಂಹ ರಾವ್ - ಯಾವಾಗಲೂ ಭಾಗವಹಿಸಿದ್ದಾರೆ. ಪ್ರಧಾನಿ ಭಾಗವಹಿಸದಿರುವುದು ಇದೇ ಮೊದಲು, ಇದು ದುರದೃಷ್ಟಕರ" ಎಂದು ಅವರು ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
"ವಿದೇಶಾಂಗ ನೀತಿಯು ತಮಾಷೆಯಾಗಿ ಮಾರ್ಪಟ್ಟಿದೆ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದರು. ರಾಜಿ ಮಾಡಿಕೊಂಡ ಪ್ರಧಾನಿಯಿಂದಾಗಿ, ದೇಶ ಈ ಪರಿಸ್ಥಿತಿಯಲ್ಲಿದೆ" ಎಂದು ಟ್ಯಾಗೋರ್ ವಾಗ್ದಾಳಿ ನಡೆಸಿದರು.
ಭಾರತವು ಇರಾನ್ನ ಪರಮೋಚ್ಚ ನಾಯಕನ ಸಾವಿಗೆ ಸಂತಾಪ ಸೂಚಿಸಬೇಕಿತ್ತು ಮತ್ತು ವಿದೇಶಾಂಗ ನೀತಿ ನಿರ್ಧಾರಗಳಲ್ಲಿ ಅವಲಂಬಿತರಂತೆ ಕಾಣುವ ಬದಲು ತನ್ನ ಸಾರ್ವಭೌಮತ್ವವನ್ನು ಪ್ರತಿಪಾದಿಸಬೇಕಿತ್ತು ಎಂದು ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಹೇಳಿದ್ದಾರೆ.
"ಸರ್ಕಾರವು ಸರ್ವಪಕ್ಷ ಸಭೆ ನಡೆಸುತ್ತಿರುವುದು ಒಳ್ಳೆಯದು. ವಿರೋಧ ಪಕ್ಷಗಳು ಮತ್ತು ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪೂರೈಕೆ ಸರಪಳಿಯನ್ನು ಹೆಚ್ಚಿಸಲು ಮತ್ತು ನಮಗೆ ಯಾವುದೇ ಬಿಕ್ಕಟ್ಟು ಉಂಟಾಗದಂತೆ ನೋಡಿಕೊಳ್ಳಲು ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ವಿವರಿಸಬೇಕು" ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಅವರು, ಇರಾನ್ ಬಗ್ಗೆ ಸರ್ಕಾರದ ಧೋರಣೆಯೇ ದೇಶೀಯ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಆರೋಪಿಸಿದರು.
Advertisement