

ಪುದುಚೇರಿ: ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಇಪ್ಪತ್ತೆಂಟು ಎಐಎಡಿಎಂಕೆ ಶಾಸಕರನ್ನು ಪುದುಚೇರಿಯ ಪೂರನ್ಕುಪ್ಪಂನಲ್ಲಿರುವ ಖಾಸಗಿ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.
ಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಚಾರಕ್ಕೆ ಎಐಎಡಿಎಂಕೆ ಪಕ್ಷದಲ್ಲಿ ಬಿರುಕು ಮೂಡಿದ್ದು, ಕೆಲವು ಶಾಸಕರು ವಿಜಯ್ ಪರ ಒಲವು ಹೊಂದಿದ್ದಾರೆ. ಹೀಗಾಗಿ ಎಐಎಡಿಎಂಕೆ ಹಿರಿಯ ನಾಯಕ ಸಿವಿ ಷಣ್ಮುಗಂ ಅವರ ಬೆಂಬಲಿಗ ಶಾಸಕರನ್ನು ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಎಐಎಡಿಎಂಕೆಯ ಹಲವು ಶಾಸಕರು ಪುದುಚೇರಿ ರೆಸಾರ್ಟ್ನಲ್ಲಿ ಉಳಿದುಕೊಂಡಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಟಿವಿಕೆ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಬಹುದು ಎಂಬ ಭೀತಿಯಿಂದ ಅವರನ್ನು ರೆಸಾರ್ಟ್ ಕರೆದೊಯ್ಯಲಾಗಿದೆ ಎಂದು ಎಐಎಡಿಎಂಕೆ ಹೇಳಿದೆ.
ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಈಗಾಗಲೇ ಐದು ಕಾಂಗ್ರೆಸ್ ಶಾಸಕರ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಆದರೆ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತವನ್ನು ತಲುಪಲು ಇನ್ನೂ ಐದು ಶಾಸಕರ ಬೆಂಬಲದ ಅಗತ್ಯವಿದೆ.
Advertisement