

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ಕೋಲ್ಕತ್ತಾದಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಭೇಟಿ ನೀಡಿದರು.
ಇಂದು ಮಧ್ಯಾಹ್ನ 3:15 ರ ಸುಮಾರಿಗೆ ದೀದಿ ನಿವಾಸಕ್ಕೆ ಆಗಮಿಸಿದ ಅಖಿಲೇಶ್ ಯಾದವ್ ಅವರನ್ನು ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸ್ವಾಗತಿಸಿದರು. ಬಳಿಕ ಉಭಯ ನಾಯಕರ ನಡುವೆ ಕೆಲಕಾಲ ಚರ್ಚೆ ನಡೆಯಿತು.
ಸಭೆಯು ಸೌಹಾರ್ದಯುತ ವಾತಾವರಣಕ್ಕೆ ಸಾಕ್ಷಿಯಾಯಿತು. ಉಭಯ ನಾಯಕರು ಶುಭಾಶಯ ವಿನಿಮಯ ಮಾಡಿಕೊಂಡರು ಮತ್ತು ಸಭೆಯ ಆರಂಭದಲ್ಲಿ, ಅಖಿಲೇಶ್ ಯಾದವ್ ಮತ್ತು ಅಭಿಷೇಕ್ ಬ್ಯಾನರ್ಜಿ ಪರಸ್ಪರ ಅಪ್ಪಿಕೊಂಡರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಿಎಂಸಿ ಅಧಿಕೃತ ಮೂಲಗಳು ಹೇಳುವಂತೆ ಚರ್ಚೆಯು ಸಕಾರಾತ್ಮಕವಾಗಿತ್ತು. ಅಖಿಲೇಶ್ ಯಾದವ್, ಅಭಿಷೇಕ್ ಬ್ಯಾನರ್ಜಿಗೆ "ನೀವೆಲ್ಲರೂ ಎಂತಹ ಶ್ಲಾಘನೀಯ ಯುದ್ಧ ಮಾಡಿದ್ದೀರಿ" ಎಂದು ಹೇಳಿದ್ದಾರೆ. "ದೀದಿ, ನೀವು ಸೋತಿಲ್ಲ" ಎಂದು ಅಖಿಲೇಶ್ ಯಾದವ್ ಅವರು ಮಮತಾ ಬ್ಯಾನರ್ಜಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳ ಅದ್ಭುತ ಗೆಲುವಿನ ನಡುವೆ ಈ ಸಭೆ ನಡೆದಿದೆ. ಕಳೆದ 15 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ಅಧಿಕಾರದಲ್ಲಿರುವ ಟಿಎಂಸಿ 80 ಸ್ಥಾನಗಳನ್ನು ಮಾತ್ರ ಗೆದ್ದಿದೆ.
Advertisement