ಆಗಸದಲ್ಲಿ ದಾರಿ ತಪ್ಪಿದ ಮಹಾರಾಷ್ಟ್ರ ಡಿಸಿಎಂ Eknath Shinde ಹೆಲಿಕಾಪ್ಟರ್; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್, Video!

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ.
Eknath Shinde
ಏಕನಾಥ್ ಶಿಂಧೆ
Updated on

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ. ಆದರೆ ಪೈಲಟ್‌ನ ಸಮಯಪ್ರಜ್ಞೆ ಮತ್ತು ಚಾಕಚಕ್ಯತೆಯಿಂದ ವಿಮಾನವನ್ನು ಸುರಕ್ಷಿತವಾಗಿ Juhu Airport ನಲ್ಲಿ ಇಳಿಸಲಾಗಿದ್ದು, ಸಂಭವನೀಯ ಅನಾಹುತ ತಪ್ಪಿದೆ.

ಮೂಲಗಳ ಪ್ರಕಾರ, ಹವಾಮಾನ ಹಾಗೂ ತಾಂತ್ರಿಕ ಸಂವಹನದ ಅಡಚಣೆಗಳಿಂದ ವಿಮಾನದ ದಿಕ್ಕಿನಲ್ಲಿ ಗೊಂದಲ ಉಂಟಾಗಿತ್ತು ಎನ್ನಲಾಗಿದೆ. ಪರಿಸ್ಥಿತಿಯನ್ನು ಗಮನಿಸಿದ ಪೈಲಟ್ ತಕ್ಷಣವೇ ವಿಮಾನ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಸಾಧಿಸಿ, ಸುರಕ್ಷಿತ ಮಾರ್ಗದರ್ಶನದ ಮೂಲಕ ವಿಮಾನವನ್ನು ಜುಹು ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಮಾಡಿದ್ದಾರೆ.

Eknath Shinde
ಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!

ಘಟನೆ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸುರಕ್ಷಿತ ಲ್ಯಾಂಡಿಂಗ್ ಬಳಿಕ ಎಲ್ಲರೂ ನಿಟ್ಟುಸಿರು ಬಿಟ್ಟರು. ಉಪ ಮುಖ್ಯಮಂತ್ರಿ ಶಿಂಧೆ ಅವರು ಸಹ ಪೈಲಟ್‌ನ ತಕ್ಷಣದ ನಿರ್ಧಾರ ಮತ್ತು ಕಾರ್ಯಕ್ಷಮತೆಯನ್ನು ಮೆಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ವಿಮಾನಯಾನ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ತಾಂತ್ರಿಕ ಮತ್ತು ಹವಾಮಾನ ಸಂಬಂಧಿತ ಅಂಶಗಳ ಪರಿಶೀಲನೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com