ಬಂಗಾಳ ಸಿಎಂ ಸುವೇಂದು ಆಪ್ತನ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನ

ಹಂತಕರು ಪಶ್ಚಿಮ ಬಂಗಾಳದ ಹೊರಗಿನವರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ, ಎಸ್‌ಐಟಿ ತಂಡವನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿತ್ತು.
Three held from UP for murder of Bengal CM Suvendu Adhikari’s aide; UPI payment becomes crucial clue
ತನಿಖಾಧಿಕಾರಿಗಳು
Updated on

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದಿಂದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೇ 6 ರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್‌ನಲ್ಲಿ ನಡೆದ ಭೀಕರ ಹತ್ಯೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಮೂವರು ಹಂತಕರನ್ನು ಬಂಧಿಸಿದೆ.

ಪೊಲೀಸರ ಪ್ರಕಾರ, ತನಿಖಾಧಿಕಾರಿಗಳು ಡಿಜಿಟಲ್, ಯುಪಿಐ ಪಾವತಿ ಪುರಾವೆಗಳು ಮತ್ತು ಅಂತರರಾಜ್ಯ ಸಂಪರ್ಕಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ಗುರುತಿಸಿದ್ದಾರೆ.

Three held from UP for murder of Bengal CM Suvendu Adhikari’s aide; UPI payment becomes crucial clue
ಚುನಾವಣಾ ಆಯೋಗದ ವಿಶೇಷ ವೀಕ್ಷಕರಾಗಿದ್ದ ವ್ಯಕ್ತಿ ಬಂಗಾಳ CM ಸಲಹೆಗಾರರಾಗಿ ನೇಮಕ; ಸುವೇಂದು ನಡೆ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ?

ಬಂಧಿತ ಆರೋಪಿಗಳನ್ನು ಬಿಹಾರದ ಬಕ್ಸಾರ್ ಜಿಲ್ಲೆಯ ಪಾಂಡಿಯಪಟ್ಟಿ ನಿವಾಸಿ ವಿಶಾಲ್ ಶ್ರೀವಾಸ್ತವ ಮತ್ತು ಇತರ ಇಬ್ಬರು ಉತ್ತರ ಪ್ರದೇಶದವರು ಎಂದು ಗುರುತಿಸಲಾಗಿದೆ. ಆರೋಪಿಗಳಲ್ಲಿ ಒಬ್ಬರು ಶಾರ್ಪ್‌ಶೂಟರ್ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

"ಹಂತಕರು ಪಶ್ಚಿಮ ಬಂಗಾಳದ ಹೊರಗಿನವರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ, ಎಸ್‌ಐಟಿ ತಂಡವನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆತರಲಾಗುವುದು" ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಕೊಲೆಯನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವಲ್ಲಿ ಕನಿಷ್ಠ ಎಂಟು ಜನರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com