ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಾಲಯದ ಗೋಡೆ ಕುಸಿದು 6 ಭಕ್ತರು ಸಾವು: 14 ಮಂದಿಗೆ ಗಾಯ; ಹಲವರ ಸ್ಥಿತಿ ಗಂಭೀರ!

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾರೀ ಮಳೆಯಿಂದಾಗಿ ದೇವಾಲಯದ ಗೋಡೆ ಕುಸಿದು ಒಂದು ದೊಡ್ಡ ಅನಾಹುತ ಸಂಭವಿಸಿದೆ. ದುರಂದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು 14 ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಾಲಯದ ಗೋಡೆ ಕುಸಿದು 6 ಭಕ್ತರು ಸಾವು: 14 ಮಂದಿಗೆ ಗಾಯ; ಹಲವರ ಸ್ಥಿತಿ ಗಂಭೀರ!
Updated on

ಮುಂಬೈ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾರೀ ಮಳೆಯಿಂದಾಗಿ ದೇವಾಲಯದ ಗೋಡೆ ಕುಸಿದು ಒಂದು ದೊಡ್ಡ ಅನಾಹುತ ಸಂಭವಿಸಿದೆ. ದುರಂದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು 14 ಮಂದಿ ಗಾಯಗೊಂಡಿದ್ದಾರೆ. ಪ್ರದೇಶದಲ್ಲಿ ನಿರಂತರ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಅಪಘಾತ ಸಂಭವಿಸಿದೆ. ಇದ್ದಕ್ಕಿದ್ದಂತೆ ದೇವಾಲಯದ ಗೋಡೆ ಕುಸಿದಿದ್ದರಿಂದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದರು.

ಘಟನೆಯ ನಂತರ ಸ್ಥಳದಲ್ಲಿ ಆತಂಕ ಉಂಟಾಯಿತು. ಸ್ಥಳೀಯ ಜನರು ಮತ್ತು ಆಡಳಿತದ ಸಹಾಯದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಅಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಪೊಲೀಸ್ ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆರವುಗೊಳಿಸಲು ಪ್ರಾರಂಭಿಸಿದವು. ಅಧಿಕಾರಿಗಳ ಪ್ರಕಾರ, ನಿರಂತರ ಮಳೆ ಗೋಡೆಯನ್ನು ದುರ್ಬಲಗೊಳಿಸಿದ್ದು, ಅಪಘಾತಕ್ಕೆ ಕಾರಣವಾಗಿದೆ. ಆಡಳಿತವು ಪ್ರಸ್ತುತ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ ಎಂದರು.

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇವಾಲಯದ ಗೋಡೆ ಕುಸಿದು 6 ಭಕ್ತರು ಸಾವು: 14 ಮಂದಿಗೆ ಗಾಯ; ಹಲವರ ಸ್ಥಿತಿ ಗಂಭೀರ!
'ಸನಾತನ ಧರ್ಮ ನಾಶ ಮಾಡಬೇಕು'- ಉದಯನಿಧಿ ಸ್ಟಾಲಿನ್; ಇತ್ತ ಕೊಲ್ಲೂರು ದೇಗುಲಕ್ಕೆ ತಾಯಿ ದುರ್ಗಾ ಸ್ಟಾಲಿನ್ ಭೇಟಿ! ಅಸಲೀಯತ್ತೇನು?

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com