ಕೇಜ್ರಿವಾಲ್, AAP ನಾಯಕರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭ: ಹೈಕೋರ್ಟ್ ನ್ಯಾಯಮೂರ್ತಿ ಹೇಳಿದ್ದೇನು?

ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ದುರ್ಗೇಶ್ ಪಾಠಕ್, ಸಂಜಯ್ ಸಿಂಗ್, ವಿನಯ್ ಮಿಶ್ರಾ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರೂ ಕೂಡಾ ಇದೆ.
High Court judge Justice Swarana Kanta Sharma and Aam Aadmi Party (AAP) national convenor Arvind Kejriwal
ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ , ಕೇಜ್ರಿವಾಲ್
Updated on

ನವದೆಹಲಿ: ತಮ್ಮನ್ನು ಗುರಿಯಾಗಿಸಿದ ಅವಹೇಳನಾಕಾರಿ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದ ಇತರ ನಾಯಕರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಗುರುವಾರ ಆರಂಭಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಯಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ದುರ್ಗೇಶ್ ಪಾಠಕ್, ಸಂಜಯ್ ಸಿಂಗ್, ವಿನಯ್ ಮಿಶ್ರಾ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರೂ ಕೂಡಾ ಇದೆ.

ಅಬಕಾರಿ ನೀತಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಶರ್ಮಾ, ನ್ಯಾಯಾಲಯದ ವಿರುದ್ಧ ಸಾಮಾಜಿಕ ಮಾಧ್ಯಮ ಅಭಿಯಾನ ನಡೆಸುತ್ತಿದ್ದಾರೆ ಮತ್ತು ಅದರ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸುತ್ತಿದ್ದಾರೆ."ಅರವಿಂದ್ ಕೇಜ್ರಿವಾಲ್ ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿರುದ್ಧ ಉದ್ದೇಶಪೂರ್ವಕ ನಿಂದನಾತ್ಮಕ ಹೇಳಿಕೆ ಪೋಸ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

"ನಾನು ವಾದದಿಂದ ಹಿಂದೆ ಸರಿಯಲು ನಿರಾಕರಿಸಿದ ನಂತರ ಅರವಿಂದ್ ಕೇಜ್ರಿವಾಲ್, ಕಾನೂನು ಪರಿಹಾರಗಳನ್ನು ಪಡೆಯುವ ಬದಲು ನನ್ನ ಮಾನನಷ್ಟ ಮಾಡಲು ಪ್ರಯತ್ನಿಸಿದರು. ವಾಕ್ ಸ್ವಾತಂತ್ರ್ಯದ ನೆಪದಲ್ಲಿ ನ್ಯಾಯಾಲಯದ ಅಧಿಕಾರವನ್ನು ಕಡಿಮೆ ಮಾಡುವ ಉದ್ದೇಶಪೂರ್ವಕ ಪ್ರಯತ್ನಕ್ಕೆ ಅವಕಾಶ ನೀಡಲ್ಲ ಎಂದು ಶರ್ಮಾ ಹೇಳಿದರು. ಈ ಮಧ್ಯೆ ಅಬಕಾರಿ ನೀತಿ ಪ್ರಕರಣದಲ್ಲಿ ನನ್ನನ್ನು ನಾನು ರಕ್ಷಿಸಿಕೊಳ್ಳುತ್ತಿಲ್ಲ. ಆದರೆ ಈ ವಿಷಯವನ್ನು ಈಗ ಮತ್ತೊಂದು ಪೀಠವು ವಿಚಾರಣೆ ನಡೆಸಲಿದೆ ಎಂದು ಹೇಳಿದರು.

ಇದಕ್ಕೂ ಮುನ್ನ, ನಾನು "ಮೌನವಾಗಿರಲು ಸಾಧ್ಯವಿಲ್ಲ" ಎಂದು ಹೇಳಿದ ನ್ಯಾಯಾಧೀಶರು, ಕೋರ್ಟ್ ವಿರುದ್ಧ ಸಾಮಾಜಿಕ ಮಾಧ್ಯಮ ಅಭಿಯಾನವನ್ನು ನಡೆಸುತ್ತಿದ್ದಾರೆ ಮತ್ತು ಅದರ ನಿಷ್ಪಕ್ಷಪಾತತೆಯನ್ನು ಪ್ರಶ್ನಿಸಿದ್ದಾರೆ ಎಂಬ ಆರೋಪದ ಮೇಲೆ ಕೆಲವು ಖುಲಾಸೆಗೊಂಡ ಆರೋಪಿಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ಪ್ರಾರಂಭಿಸುವುದಾಗಿ ಹೇಳಿದರು.

High Court judge Justice Swarana Kanta Sharma and Aam Aadmi Party (AAP) national convenor Arvind Kejriwal
Delhi Liquor Scam: ನ್ಯಾ. ಸ್ವರ್ಣ ಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲ; ಕೇಜ್ರಿವಾಲ್ ಬೆನ್ನಲ್ಲೇ ಕೋರ್ಟ್ ಬಹಿಷ್ಕರಿಸಿದ ಸಿಸೋಡಿಯಾ..!

"ಪ್ರತಿವಾದಿಗಳಲ್ಲಿ ಕೆಲವರು ನನ್ನ ವಿರುದ್ಧ ಮತ್ತು ಈ ನ್ಯಾಯಾಲಯದ ವಿರುದ್ಧ ಅತ್ಯಂತ ಅವಹೇಳನಕಾರಿ ಮತ್ತು ಮಾನಹಾನಿಕರ ವಿಷಯವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ ಮತ್ತು ನಾನು ಮೌನವಾಗಿರಲು ಸಾಧ್ಯವಿಲ್ಲ. ಕೆಲವು ಪ್ರತಿವಾದಿಗಳು ಮತ್ತು ಇತರ ಕೆಲವು ಅಸಂಬದ್ಧರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಲು ನಾನು ನಿರ್ಧರಿಸಿದ್ದೇನೆ" ಎಂದು ನ್ಯಾಯಾಧೀಶರು ಹೇಳಿದರು.

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅವರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com