ಕೇರಳ CM ಆಯ್ಕೆ ಕಗ್ಗಂಟು: ವಿಡಿ ಸತೀಶನ್ ಅಥವಾ ಕೆಸಿ ವೇಣುಗೋಪಾಲ್? ಎಲ್ಲಾ ಸಸ್ಪೆನ್ಸ್ ಗಳಿಗೆ ಇಂದು ಅಂತಿಮ ತೆರೆ!

ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ.
KC venugopal, VD satheesan
ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ
Updated on

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ.

ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ, ವೀಕ್ಷಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ಇತರರು ಭಾಗವಹಿಸಲಿದ್ದಾರೆ.

ಹಿರಿಯ ನಾಯಕರಾದ ವಿ.ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರ ನಡುವಿನ ತೀವ್ರ ತ್ರಿಕೋನ ಸ್ಪರ್ಧೆಗೆ ಒಂಬತ್ತು ದಿನಗಳ ನಂತರ ಅಂತಿಮ ತೀರ್ಮಾನ ಹೊರಬೀಳಲಿದೆ.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ನಿರ್ಣಾಯಕ ಸಭೆಯ ನಂತರ ಮುಖ್ಯಮಂತ್ರಿ ಅಭ್ಯರ್ಥಿಯ ಘೋಷಣೆ ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು, 40 ನಿಮಿಷಗಳಿಗೂ ಹೆಚ್ಚು ಕಾಲ ನಡೆದ ಸಭೆಯ ನಂತರ ಮಾತನಾಡಿದ, ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಗುರುವಾರ ಘೋಷಿಸಲಾಗುವುದು ಎಂದು ತಿಳಿಸಿದರು.

KC venugopal, VD satheesan
ಕೇರಳ ಸಿಎಂ ರೇಸ್‌ನಲ್ಲಿ ಕೆ.ಸಿ ವೇಣುಗೋಪಾಲ್ ಮೇಲುಗೈ; ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಸಾಧ್ಯತೆ

ಕಾಂಗ್ರೆಸ್ ಹೈಕಮಾಂಡ್ ಎಲ್ಲಾ ಚರ್ಚೆಗಳನ್ನು ಪೂರ್ಣಗೊಳಿಸಿದೆ ಮತ್ತು ಕೇರಳದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ನಿರ್ಧಾರವನ್ನು ನಾಳೆ ಪ್ರಕಟಿಸಲಾಗುವುದು ಎಂದು ರಮೇಶ್ ಹೇಳಿದರು.

'ಪಟ್ಟದ ಆಟ'ದಲ್ಲಿ ಅಂತಿಮವಾಗಿ ಯಾರು ಗೆದ್ದರು ಎಂಬ ಬಗ್ಗೆ ಊಹಾಪೋಹಗಳು ಮುಂದುವರಿದಿದ್ದರೂ, ಹೊಸದಾಗಿ ಆಯ್ಕೆಯಾದ ಶಾಸಕರು, ಸಂಸದರು, ಮಾಜಿ ಕೆಪಿಸಿಸಿ ಅಧ್ಯಕ್ಷರು, ಕಾರ್ಯಕಾರಿ ಅಧ್ಯಕ್ಷರು ಮತ್ತು ಇತರ ಹಿರಿಯ ನಾಯಕರೊಂದಿಗೆ ಹಲವಾರು ಸುತ್ತಿನ ಸಮಾಲೋಚನೆಗಳ ನಂತರ ಕಾಂಗ್ರೆಸ್ ನಾಯಕತ್ವವು ಒಂದು ನಿರ್ಧಾರಕ್ಕೆ ಬಂದಿದೆ.

ದೀರ್ಘಕಾಲದ ಅನಿಶ್ಚಿತತೆಯನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ಮಂಗಳವಾರ, ರಾಹುಲ್ ಗಾಂಧಿ ಹಲವಾರು ಪಕ್ಷದ ನಾಯಕರೊಂದಿಗೆ ಮುಖಾಮುಖಿ ಸಭೆಗಳನ್ನು ನಡೆಸಿದರು. ಮೇ 13, 2026 ರಂದು ಬುಧವಾರ ತಿರುವನಂತಪುರದ ವೆಲ್ಲಯಂಬಲಂನಲ್ಲಿರುವ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ, ಇಂದಿರಾ ಭವನದ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಜಮಾಯಿಸಿದ್ದರು.

ಕೇರಳ ಮುಖ್ಯಮಂತ್ರಿ ಸ್ಪರ್ಧೆ ಕೆ ಸಿ ವೇಣುಗೋಪಾಲ್ ಪರವಾಗಿ ಒಲವು; ಹೈಕಮಾಂಡ್ ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ

ರಾಹುಲ್ ಗಾಂಧಿಯವರ ಆಪ್ತ ಎಂದು ಪರಿಗಣಿಸಲಾದ ವೇಣುಗೋಪಾಲ್ ಅವರಿಗೆ ಬಹುಪಾಲು ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಬೆಂಬಲವಿದೆ ಎಂದು ವರದಿಯಾಗಿದೆ, ಆದರೆ ಸತೀಸನ್ ಐಯುಎಂಎಲ್ ಸೇರಿದಂತೆ ಪ್ರಭಾವಿ ಯುಡಿಎಫ್ ಮಿತ್ರಪಕ್ಷಗಳ ಬೆಂಬಲವನ್ನು ಉಳಿಸಿಕೊಂಡಿದ್ದಾರೆ. ವೇಣುಗೋಪಾಲ್ 63 ಕಾಂಗ್ರೆಸ್ ಶಾಸಕರಲ್ಲಿ ಕನಿಷ್ಠ 47 ಜನರ ಬೆಂಬಲವನ್ನು ಪಡೆದುಕೊಂಡಿದ್ದಾರೆ ಎಂದು ಮೂಲಗಳು ಸೂಚಿಸುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com