

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗೆದ್ದಿದ್ದ ಭಬಾನಿಪುರ ಕ್ಷೇತ್ರವನ್ನು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಉಳಿಸಿಕೊಂಡಿದ್ದು, ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸಭಾ ನಿಯಮಗಳ ಅಡಿಯಲ್ಲಿ ನಿಗದಿಪಡಿಸಲಾದ 14 ದಿನಗಳ ಅವಧಿಯೊಳಗೆ ಸುವೇಂದು ಅಧಿಕಾರಿ ಸ್ಪೀಕರ್ ರತೀಂದ್ರ ಬೋಸ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ಪುರ್ಬಾ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ಮತ್ತು ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಎರಡರಿಂದಲೂ ಸ್ಪರ್ಧಿಸಿದ್ದರು.
ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.
Advertisement