"ಪಾಕಿಸ್ತಾನ ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ...": ಬಿಗ್ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ!

ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡ ಸೇನಾ ಮುಖ್ಯಸ್ಥರಿಗೆ ಕಳೆದ ವರ್ಷ ಆಪರೇಷನ್ ಸಿಂಧೂರ್ ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕೇಳಲಾಯಿತು.
 General Upendra Dwivedi
ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
Updated on

ನವದೆಹಲಿ: ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ, ಅವರು "ಭೌಗೋಳಿಕತೆ ಅಥವಾ ಇತಿಹಾಸದ ಭಾಗವಾಗಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಬೇಕು" ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಬಿಗ್ ವಾರ್ನಿಂಗ್ ನೀಡಿದ್ದಾರೆ.

ದೆಹಲಿಯ ಮಾಣೆಕ್ ಶಾ ಕೇಂದ್ರದಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಪಾಲ್ಗೊಂಡ ಸೇನಾ ಮುಖ್ಯಸ್ಥರಿಗೆ ಕಳೆದ ವರ್ಷ ಆಪರೇಷನ್ ಸಿಂಧೂರ್ ಗೆ ಕಾರಣವಾದ ಸಂದರ್ಭಗಳು ಮತ್ತೆ ಬಂದರೆ ಭಾರತೀಯ ಸೇನೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂದು ಕೇಳಲಾಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಉಪೇಂದ್ರ ದ್ವಿವೇದಿ, ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮತ್ತು ಭಾರತದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ, ಅವರು ಭೌಗೋಳಿಕತೆ ಅಥವಾ ಇತಿಹಾಸದ ಭಾಗವಾಗಬೇಕೆ ಅಥವಾ ಬೇಡವೇ ಎಂದು ನಿರ್ಧರಿಸಬೇಕು ಎಂದು ಹೇಳಿದರು.

 General Upendra Dwivedi
ಈಗ ಯುದ್ಧಗಳನ್ನು ಕೇವಲ ಗುಂಡು ಹಾರಿಸಿ ಗೆಲ್ಲಲು ಸಾಧ್ಯವಿಲ್ಲ; 'ಹೈಬ್ರಿಡ್' ಸಿದ್ಧತೆ ಅತ್ಯಗತ್ಯ ಏಕೆ?; ಜನರಲ್ ಉಪೇಂದ್ರ ದ್ವಿವೇದಿ

ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ನ ಮೊದಲ ವಾರ್ಷಿಕೋತ್ಸವ ಆಚರಿಸಿದ ಬೆನ್ನಲ್ಲೇ ಉಪೇಂದ್ರ ದ್ವಿವೇದಿ ಈ ಹೇಳಿಕೆ ನೀಡಿದ್ದಾರೆ. ಅವರು ಚಿಕ್ಕದಾಗಿ ಹೇಳಿದ್ದರೂ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದರು ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಪುನರುಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com