

ತಿರುವನಂತಪುರಂ: ಈ ವಾರ ಕೇರಳದ ವಯನಾಡಿನಲ್ಲಿ ಪಕ್ಷದ ಕಚೇರಿ ಮತ್ತು ಹತ್ತಿರದ ಪ್ರದೇಶಗಳ ಗೋಡೆಗಳ ಮೇಲೆ ಹಿರಿಯ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಪೋಸ್ಟರ್ಗಳನ್ನು ಹಾಕಿದ್ದ ಕುರಿತು ಕೇರಳದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೇ 13 ರಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕ್ಷೇತ್ರವಾದ ವಯನಾಡಿನಲ್ಲಿ ಕೇರಳದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಬಗ್ಗೆ ಸಸ್ಪೆನ್ಸ್ ಮುಂದುವರೆದಂತೆ ಪೋಸ್ಟರ್ಗಳು ಕಾಣಿಸಿಕೊಂಡಿದ್ದವು. ರಾಜ್ಯದ ಉನ್ನತ ಹುದ್ದೆಗೆ ಕೆ.ಸಿ. ವೇಣುಗೋಪಾಲ್ ಅವರನ್ನು ಆಯ್ಕೆ ಮಾಡುವುದರ ವಿರುದ್ಧ ಪೋಸ್ಟರ್ಗಳು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಲಾಗಿತ್ತು.
"ರಾಹುಲ್, ಕೆ.ಸಿ. ನಿಮ್ಮ ಬ್ಯಾಗ್ ಧಾರಕರಾಗಬಹುದು ಆದರೆ ಕೇರಳದ ಜನರು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ," ಎಂದು ಪೋಸ್ಟರ್ಗಳಲ್ಲಿ ಪೈಕಿ ಒಂದರಲ್ಲಿ ಬರೆಯಲಾಗಿತ್ತು.
ಕೆಸಿ ವೇಣುಗೋಪಾಲ್ ಅವರನ್ನು ಸಿಎಂ ಮಾಡುವ ನಿರ್ಧಾರ ತೆಗೆದುಕೊಂಡರೆ ವಯನಾಡ್ "ಮುಂದಿನ ಅಮೇಥಿ" ಆಗುತ್ತದೆ ಎಂದು ಪೋಸ್ಟರ್ಗಳಲ್ಲಿ ಎಚ್ಚರಿಕೆ ನೀಡಲಾಗಿತ್ತು. 2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಿದ್ದ ಉತ್ತರ ಪ್ರದೇಶದ ಗಾಂಧಿ ಕುಟುಂಬದ ಭದ್ರಕೋಟೆಯನ್ನು ಉಲ್ಲೇಖಿಸಿ ಈ ಎಚ್ಚರಿಕೆ ನೀಡಲಾಗಿತ್ತು.
"ರಾಹುಲ್ ಮತ್ತು ಪ್ರಿಯಾಂಕಾ ವಯನಾಡನ್ನು ಮರೆತುಬಿಡಿ. ನೀವು ಇಲ್ಲಿಂದ ಮತ್ತೆ ಗೆಲ್ಲುವುದಿಲ್ಲ" ಎಂದು ಮತ್ತೊಂದು ಪೋಸ್ಟರ್ನಲ್ಲಿ ಬರೆಯಲಾಗಿತ್ತು. ಗೋಡೆಗಳ ಮೇಲೆ ವ್ಯಕ್ತಿಯೊಬ್ಬರು ಪೋಸ್ಟರ್ಗಳನ್ನು ಅಂಟಿಸುತ್ತಿರುವುದು ಕಂಡುಬಂದಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಪೋಸ್ಟರ್ ಅಂಟಿಸಿದವರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡಿನ ಕಾಂಗ್ರೆಸ್ ಶಾಸಕ ಟಿ. ಸಿದ್ದಿಕ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಒಂದು ದಶಕದ ನಂತರ ಮತ್ತೆ ಅಧಿಕಾರಕ್ಕೆ ಬಂದಿದೆ.
5 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದ ವಿ.ಡಿ. ಸತೀಶನ್ ಕೇರಳದ ನೂತನ ಸಿಎಂ ಆಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಕೇಳಿಬಂದಿದ್ದ ಮೂವರು ಪ್ರಮುಖ ಸ್ಪರ್ಧಿಗಳ ಪೈಕಿ ಸತೀಶನ್, ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಇದ್ದರು.
Advertisement