2020 ರ ದೆಹಲಿ ಗಲಭೆ: ಉಮರ್ ಖಾಲಿದ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು! ಷರತ್ತುಗಳೇನು?

ಈ ಪ್ರಕರಣದಲ್ಲಿ ಖಾಲಿದ್‌ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.
Umar Khalid
ಉಮರ್ ಖಾಲಿದ್TNIE
Updated on

ನವದೆಹಲಿ: 2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್‌ಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ ಖಾಲಿದ್‌ಗೆ ತಾತ್ಕಾಲಿಕ ಪರಿಹಾರ ನೀಡಲಾಗಿತ್ತು ಎಂಬುದನ್ನು ಪರಿಗಣಿಸಿದ ನ್ಯಾಯಾಲಯ, ಜೂನ್ 1 ರಿಂದ ಜೂನ್ 3 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಕಳೆದ ತಿಂಗಳು ನಿಧನರಾದ ತನ್ನ ಚಿಕ್ಕಪ್ಪನ 'ಚೆಹಲ್ಲಮ್' ಆಚರಣೆಗೆ ಹಾಜರಾಗಲು ಖಾಲಿದ್ 15 ದಿನಗಳ ಮಧ್ಯಂತರ ಜಾಮೀನು ಕೋರಿದ್ದರು.

Umar Khalid
ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮ: BJP ಯುವ ಮೋರ್ಚಾ ಪ್ರತಿಭಟನೆ, ಹಲವರು ವಶಕ್ಕೆ

ಹಲವು ಷರತ್ತುಗಳೊಂದಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಖಾಲಿದ್ ದೆಹಲಿ-ಎನ್‌ಸಿಆರ್ ಪ್ರದೇಶದೊಳಗೆ ಇರಬೇಕು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿರುವ ವಿಳಾಸದಲ್ಲಿ ಮಾತ್ರ ಇರಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಆಸ್ಪತ್ರೆ ಹೊರತುಪಡಿಸಿ ಬೇರೆಲ್ಲಿಯೂ ಪ್ರಯಾಣಿಸಲು ಅವರಿಗೆ ಅವಕಾಶವಿರುವುದಿಲ್ಲ ಮತ್ತು ಮಧ್ಯಂತರ ಜಾಮೀನು ಅವಧಿಯಲ್ಲಿ ಕೇವಲ ಒಂದು ಮೊಬೈಲ್ ಫೋನ್ ಸಂಖ್ಯೆಯನ್ನು ಮಾತ್ರ ಬಳಸಬೇಕು. ಜಾಮೀನು ಸೀಮಿತ ಸ್ವರೂಪದ್ದಾಗಿದ್ದು, ನ್ಯಾಯಾಲಯ ವಿಧಿಸಿರುವ ಷರತ್ತುಗಳ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com