Coimbatore: 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಕ್ಷಮಿಸಲಾಗದ ಅಪರಾಧ ಎಂದ ಸಿಎಂ ವಿಜಯ್!

ಈ ಘಟನೆಯನ್ನು "ಅಮಾನವೀಯ ಮತ್ತು ಕ್ಷಮಿಸಲಾಗದ" ಅಪರಾಧ ಎಂದು ಮುಖ್ಯಮಂತ್ರಿ ಕರೆದಿದ್ದಾರೆ. ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
CM Vijay
ಸಿಎಂ ವಿಜಯ್
Updated on

ಚೆನ್ನೈ: ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆಗೆ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಶನಿವಾರ ತೀವ್ರ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಘಟನೆಯನ್ನು "ಅಮಾನವೀಯ ಮತ್ತು ಕ್ಷಮಿಸಲಾಗದ" ಅಪರಾಧ ಎಂದು ಮುಖ್ಯಮಂತ್ರಿ ಕರೆದಿದ್ದಾರೆ. ಅಂತಹ ಅಪರಾಧಗಳನ್ನು ಸಮಾಜ ಎಂದಿಗೂ ಸಹಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ದುಃಖಿತರ ಕುಟುಂಬಕ್ಕೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ತ್ವರಿತಗತಿಯಲ್ಲಿ ತನಿಖೆ ನಡೆಸಿ, ವಿಳಂಬವಿಲ್ಲದೆ ಆರೋಪಪಟ್ಟಿ ಸಲ್ಲಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದಲ್ಲಿ ಭಾಗಿಯಾಗಿರುವವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ದೃಢವಾಗಿ ಕಾರ್ಯನಿರ್ವಹಿಸುತ್ತದೆ. ನಿಟ್ಟಿನಲ್ಲಿ ಎಲ್ಲಾ ತಕ್ಷಣದ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಪಿಎಂಕೆ ಅಧ್ಯಕ್ಷ ಅನ್ಬುಮಣಿ ರಾಮದಾಸ್, ಕೊಯಮತ್ತೂರಿನಲ್ಲಿ ನಡೆದ ಬಾಲಕಿಯ ಹತ್ಯೆಯನ್ನು ಖಂಡಿಸಿದರು.

CM Vijay
ತಮಿಳು ನಾಡು: ಸಿಎಂ ವಿಜಯ್ ಸಚಿವ ಸಂಪುಟದಲ್ಲಿ 7 ದಲಿತರು, ಇಬ್ಬರು ಬ್ರಾಹ್ಮಣರಿಗೆ ಸ್ಥಾನ

ಅಪರಾಧಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರ ವಿರುದ್ಧ ಇಂತಹ ಅಪರಾಧಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com