ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ದೋಷಿ ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ!

ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್‌ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.
Alka Lamba
ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ
Updated on

ನವದೆಹಲಿ: 2024ರಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಅವರನ್ನು ದೋಷಿ ಎಂದು ದೆಹಲಿ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಶ್ವನಿ ಪನ್ವಾರ್ ಅವರು ಈ ಪ್ರಕರಣದಲ್ಲಿ ಲಂಬಾ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಅಲ್ಲದೆ, ಲಂಬಾಗೆ ಶಿಕ್ಷೆಯನ್ನು ನಿರ್ಧರಿಸುವ ಮೊದಲು ನ್ಯಾಯಾಲಯವು ಜೂನ್ 5 ರಂದು ಎರಡೂ ಕಡೆಯ ವಾದಗಳನ್ನು ಆಲಿಸಲು ದಿನಾಂಕ ನಿಗದಿಪಡಿಸಿದೆ.

ಮಹಿಳಾ ಮೀಸಲಾತಿಯನ್ನು ಬೆಂಬಲಿಸಿ 2024ರ ಜುಲೈ 29ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಂಬಾ ಅವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದರು ಮತ್ತು ಸಾರ್ವಜನಿಕ ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.

ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್‌ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

Alka Lamba
Mekedatu dam row: ಕರ್ನಾಟಕದ ಕಾಂಗ್ರೆಸ್ ಸರ್ಕಾರ ‘ದುರಹಂಕಾರಿ’ ಎಂದ ನೆಹರು; DMK 'ಕೀಳುಮಟ್ಟದ ರಾಜಕೀಯ'ದಲ್ಲಿ ತೊಡಗಿದೆ- ಮಾಣಿಕಂ ಟ್ಯಾಗೋರ್

ಕಳೆದ ಡಿಸೆಂಬರ್‌ನಲ್ಲಿ, ದೆಹಲಿ ನ್ಯಾಯಾಲಯವು ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ವಿರುದ್ಧ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ದೋಷಾರೋಪ ನಿಗದಿ ಪಡಿಸಲು ಆದೇಶಿಸಿತ್ತು.

ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ಲಂಬಾ ಸಲ್ಲಿಸಿದ್ದ ಪರಿಷ್ಕರಣಾ ಅರ್ಜಿಯನ್ನು ಫೆಬ್ರುವರಿ 6 ರಂದು ವಜಾಗೊಳಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com