

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಅವರು ಸೋಮವಾರ ಲೈಂಗಿಕ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತಕ್ಷಣ ಪ್ರಕರಣಗಳನ್ನು ದಾಖಲಿಸಿ, ತ್ವರಿತವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಖಾತರಿಪಡಿಸಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಕ್ರೂರ ಹತ್ಯೆಯ ನಂತರ, ಇಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪರಿಶೀಲಿಸಿದ ವಿಜಯ್, ಘೋರ ಅಪರಾಧಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ಪರಿಶೀಲನಾ ಸಭೆಯಲ್ಲಿ, ವಿಚಾರಣೆಯನ್ನು ತ್ವರಿತಗೊಳಿಸಲು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಜಾಗೃತಿಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ, ಅಟಾರ್ನಿ ಜನರಲ್ಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಂ. ಸಾಯಿಕುಮಾರ್, ಗೃಹ ಕಾರ್ಯದರ್ಶಿ ಕೆ. ಮಣಿವಾಸನ್, ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್, ಸಮಾಜ ಕಲ್ಯಾಣ ಮತ್ತು ಮಹಿಳಾ ಹಕ್ಕುಗಳ ಇಲಾಖೆಯ ಕಾರ್ಯದರ್ಶಿ ಮರಿಯಂ ಪಲ್ಲವಿ ಬಲದೇವ್, ಪೊಲೀಸ್ ಮಹಾನಿರ್ದೇಶಕ ಸಂದೀಪ್ ರಾಯ್ ರಾಥೋಡ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Advertisement