ಮೇಕೆದಾಟು ಯೋಜನೆಗೆ ವಿಜಯ್ ಅಡ್ಡಗಾಲು: ಕಾನೂನು ಕ್ರಮ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತಮಿಳುನಾಡು ಸಿಎಂ ಸೂಚನೆ

ಮೇಕೆದಾಟು ಯೋಜನೆಗೆ ತಮಿಳುನಾಡು ಮೊದಲಿನಿಂದಲೂ ವಿರೋಧಿಸುತ್ತಿದ್ದು, ಇದೀಗ ಹೊಸದಾಗಿ ಅಧಿಕಾರಕ್ಕೆ ಬಂದ ಟಿವಿಕೆ ಸರ್ಕಾರ ಸಹ ಅದೇ ನಿಲುವು ತಳೆದಿದೆ.
Tamil Nadu CM Vijay
ವಿಜಯ್
Updated on

ಚೆನ್ನೈ: ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ಇದೀಗ ತಮಿಳುನಾಡು ನೂತನ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಸಹ ಅಡ್ಡಗಾಲು ಹಾಕುತ್ತಿದ್ದು, ಸೋಮವಾರ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಸ್ತಾವನೆಯ ಕುರಿತು ಪರಿಶೀಲನಾ ಸಭೆ ನಡೆಸಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಮೊದಲಿನಿಂದಲೂ ವಿರೋಧಿಸುತ್ತಿದ್ದು, ಇದೀಗ ಹೊಸದಾಗಿ ಅಧಿಕಾರಕ್ಕೆ ಬಂದ ಟಿವಿಕೆ ಸರ್ಕಾರ ಸಹ ಅದೇ ನಿಲುವು ತಳೆದಿದೆ.

ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಕ್ಕೆ ಉದ್ದೇಶಿತ "ಭೂಮಿ ಪೂಜೆ" ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Tamil Nadu CM Vijay
'ಮೇಕೆದಾಟು ಯೋಜನೆ ನಿಲ್ಲಿಸುವ ಯಾವುದೇ ಹಕ್ಕು ತಮಿಳುನಾಡಿಗೆ ಇಲ್ಲ': ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ನೆರೆ ರಾಜ್ಯದ ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ'; Video

"ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಲು ಮತ್ತು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ವಿವರವಾದ ಪರಿಶೀಲನಾ ಸಭೆ ನಡೆಸಲಾಯಿತು" ಎಂದು ಪ್ರಕಟಣೆ ಹೇಳಿದೆ.

ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣಗಳ ಕುರಿತು ಚರ್ಚಿಸಲಾಯಿತು, ಸುಪ್ರೀಂ ಕೋರ್ಟ್ ಕೊನೆಯದಾಗಿ ಕೇಂದ್ರ ತಜ್ಞರು ಮಾತ್ರ ನಿರ್ಧರಿಸಬಹುದು ಎಂಬ ಹಿಂದಿನ ತೀರ್ಪಿನ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತ್ತು.

"ಮೇಲೆ ತಿಳಿಸಿದ ನ್ಯಾಯಾಲಯದ ತೀರ್ಪನ್ನು ಗಮನದಲ್ಲಿಟ್ಟುಕೊಂಡು ವಿವರವಾದ ಸಮಾಲೋಚನೆಗಳ ನಂತರ ಕಾನೂನು ಕ್ರಮಗಳನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿ ವಿಜಯ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಭೆಯಲ್ಲಿ ಸಂಪುಟ ಸಚಿವರಾದ ಎನ್ ಆನಂದ್, ಅಧವ್ ಅರ್ಜುನ ಮತ್ತು ಆರ್ ನಿರ್ಮಲ್‌ಕುಮಾರ್, ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com