ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

X ನಲ್ಲಿ ಪೋಸ್ಟ್ ಮಾಡಿದ ಅವರು, ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಿತಿ ರಚನೆಗೆ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.
Amit Shah
ಅಮಿತ್ ಶಾonline desk
Updated on

ನವದೆಹಲಿ: ಅಕ್ರಮ ವಲಸೆ ಮತ್ತು ಇತರ ಅಸಹಜ ಅಂಶಗಳಿಂದ ಉಂಟಾಗುವ "ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆ" ಎಂದು ವಿವರಿಸಿದ ವಿಷಯವನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಘೋಷಿಸಿದ್ದಾರೆ.

ಜನಸಂಖ್ಯೆ ಬದಲಾವಣೆಯ ವಿಷಯ ಭಾರತದ ಸಾರ್ವಭೌಮತ್ವ, ರಾಷ್ಟ್ರೀಯ ಭದ್ರತೆ, ಸಾಮಾಜಿಕ ಸಮತೋಲನ ಮತ್ತು ಬುಡಕಟ್ಟು ಸಮಾಜಗಳ ಸಂರಕ್ಷಣೆಗೆ ಒಂದು ಪ್ರಮುಖ ಸವಾಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

X ನಲ್ಲಿ ಪೋಸ್ಟ್ ಮಾಡಿದ ಅವರು, ಕಳೆದ ವರ್ಷದ ಸ್ವಾತಂತ್ರ್ಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಿತಿ ರಚನೆಗೆ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

"ಅಸ್ವಾಭಾವಿಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗುವ ಒಳನುಸುಳುವಿಕೆ ಮತ್ತು ಇತರ ಕಾರಣಗಳು ಯಾವುದೇ ರಾಷ್ಟ್ರದ ವರ್ತಮಾನ ಮತ್ತು ಭವಿಷ್ಯಕ್ಕೆ ಬಹಳ ಮಹತ್ವದ ಸವಾಲನ್ನು ಒಡ್ಡುತ್ತವೆ. ಈ ಸವಾಲನ್ನು ಎದುರಿಸಲು, ಆಗಸ್ಟ್ 15, 2025 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 'ಜನಸಂಖ್ಯಾ ಬದಲಾವಣೆಯ ಉನ್ನತ ಮಟ್ಟದ ಸಮಿತಿ'ಯನ್ನು ಘೋಷಿಸಿದ್ದರು. ಸರ್ಕಾರವು ಈಗ ಈ ಸಮಿತಿಯನ್ನು ರಚಿಸಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ" ಎಂದು ಗೃಹ ಸಚಿವರು ಬರೆದಿದ್ದಾರೆ.

Amit Shah
ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪ್ರಕಾಶ್ ಪ್ರಭಾಕರ್ ನವೋಲೇಕರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಲಿದ್ದು, ಮಾಜಿ ಐಎಎಸ್ ಅಧಿಕಾರಿ ದುರ್ಗಾ ಶಂಕರ್ ಮಿಶ್ರಾ, ಮಾಜಿ ಐಪಿಎಸ್ ಅಧಿಕಾರಿ ಬಾಲಾಜಿ ಶ್ರೀವಾಸ್ತವ ಮತ್ತು ಅರ್ಥಶಾಸ್ತ್ರಜ್ಞ ಡಾ. ಶಮಿಕಾ ರವಿ ಮತ್ತು ಜನಗಣತಿ ಆಯುಕ್ತರು ಸದಸ್ಯರಾಗಿದ್ದಾರೆ ಎಂದು ಶಾ ಹೇಳಿದರು. "ಗೃಹ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ (ವಿದೇಶಿಯರು-I) ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ" ಎಂದು ಅವರು ಹೇಳಿದರು.

"ಅಕ್ರಮ ವಲಸೆ ಮತ್ತು ಇತರ ಅಸ್ವಾಭಾವಿಕ ಕಾರಣಗಳಿಂದಾಗಿ ಭಾರತದಾದ್ಯಂತ ಸಂಭವಿಸುತ್ತಿರುವ ಜನಸಂಖ್ಯಾ ಬದಲಾವಣೆಗಳ" ಸಮಗ್ರ ಮೌಲ್ಯಮಾಪನವನ್ನು ಸಮಿತಿ ನಡೆಸುತ್ತದೆ ಎಂದು ಗೃಹ ಸಚಿವರು ಹೇಳಿದರು.

ಧಾರ್ಮಿಕ ಮತ್ತು ಸಾಮಾಜಿಕ ಸಮುದಾಯಗಳ ಮಟ್ಟದಲ್ಲಿ ಅಸಹಜ ಜನಸಂಖ್ಯಾ ಬದಲಾವಣೆಗಳ ಮಾದರಿಯನ್ನು ಸಮಿತಿ ವಿಶ್ಲೇಷಿಸುತ್ತದೆ ಮತ್ತು "ಅದಕ್ಕೆ ಯೋಜಿತ ಮತ್ತು ಸಮಯಕ್ಕೆ ಅನುಗುಣವಾಗಿ ಪರಿಹಾರವನ್ನು ಪ್ರಸ್ತುತಪಡಿಸುತ್ತದೆ" ಎಂದು ಅವರು ಹೇಳಿದರು.

ಅಕ್ರಮ ವಲಸೆ ಮತ್ತು ಜನಸಂಖ್ಯಾ ಬದಲಾವಣೆಗಳ ವಿಷಯ ಹಲವಾರು ರಾಜ್ಯಗಳಲ್ಲಿ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ಪುನರಾವರ್ತಿತ ಫ್ಲ್ಯಾಷ್‌ಪಾಯಿಂಟ್ ಆಗಿ ಉಳಿದಿದೆ ಎಂಬ ಕಾರಣಕ್ಕೆ ಈ ಘೋಷಣೆಯು ವ್ಯಾಪಕ ರಾಜಕೀಯ ಚರ್ಚೆಯನ್ನು ಹುಟ್ಟುಹಾಕುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com