

ಪಾಟ್ನ: ಬಿಹಾರದ ಜೆಹನಾಬಾದ್ ಜಿಲ್ಲೆಯಲ್ಲಿ ಬುಧವಾರ ಸ್ಥಳೀಯ ಗಾಯಕನೊಬ್ಬನನ್ನು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಖ್ದುಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿಪುರ ಗ್ರಾಮದ ನಿವಾಸಿ ಚುನ್ನು ಲಾಲ್ ಯಾದವ್ (35) ಈ ಪೋಸ್ಟ್ ಮೂಲಕ ಮುಖ್ಯಮಂತ್ರಿಯ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.
"ಮಗಧ ಪ್ರದೇಶದ ಸ್ಥಳೀಯ ಗಾಯಕ ಮತ್ತು ಗೀತರಚನೆಕಾರ ಚುನ್ನು ಲಾಲ್ ಯಾದವ್ ಅವರು ಮುಖ್ಯಮಂತ್ರಿಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಪೋಸ್ಟ್ ಮಾಡಿದ್ದಾರೆ ಮತ್ತು ಆಕ್ಷೇಪಾರ್ಹ ಭಾಷೆಯನ್ನು ಬಳಸಿದ್ದಾರೆ. ಈ ವಿಷಯ ನಂತರ ವೈರಲ್ ಆಗಿತ್ತು. ಅವರನ್ನು ಬಂಧಿಸಲಾಗಿದೆ" ಎಂದು ಎಸ್ಡಿಪಿಒ (ಘೋಶಿ) ಕೃತಿ ಕಮಲ್ ವರದಿಗಾರರಿಗೆ ತಿಳಿಸಿದ್ದಾರೆ.
ಪಾಟ್ನಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂತರ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಪ್ರಕರಣದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
Advertisement