

ಮುಂಬೈ: ಮುಂಬೈನ ಅಂಧೇರಿ ಪೂರ್ವ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡ ಹೊತ್ತಿ ಉರಿದಿದೆ.
ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಯತ್ನಿಸುತ್ತಿವೆ.
ಅಂಧೇರಿ ಪೂರ್ವ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಇದು ಬೆಂಕಿಯ ತೀವ್ರತೆಯನ್ನು ತೋರಿಸುತ್ತಿದೆ. ಸದ್ಯ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Advertisement