NALSAR row: ಕಾನೂನು ವಿದ್ಯಾರ್ಥಿಗಳ ನಡವಳಿಕೆ ನಿಯಂತ್ರಿಸುವ ಅಧಿಕಾರ ಬಾರ್ ಕೌನ್ಸಿಲ್‌ಗೆ ಇಲ್ಲ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಹೈದರಾಬಾದ್‌ನ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿಜೆಐ ಭಾಗವಹಿಸುವಿಕೆಯ ಪ್ರಸ್ತಾವನೆ ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ BCI ಕೈಗೊಂಡ ಕ್ರಮ ವಿವಾದಕ್ಕೆ ಕಾರಣವಾಗಿತ್ತು.
Supreme Court
ಸುಪ್ರೀಂಕೋರ್ಟ್
Updated on

ನವದೆಹಲಿ: ಕಾನೂನು ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸಲು ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ (BCI) ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಆಯಾ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ವಿಷಯವಾಗಿದ್ದು, ಅವರು ತಮ್ಮದೇ ಆದ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

ಹೈದರಾಬಾದ್‌ನ ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿಜೆಐ ಭಾಗವಹಿಸುವಿಕೆಯ ಪ್ರಸ್ತಾವನೆ ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ BCI ಕೈಗೊಂಡ ಕ್ರಮ ವಿವಾದಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿತು.

NALSAR ವಿವಾದಕ್ಕೆ ಸಂಬಂಧಿಸಿದಂತೆ BCI ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ನ್ಯಾಯಾಲಯ ರದ್ದುಗೊಳಿಸಿತು. ವ್ಯಾಪಕ ಟೀಕೆಗಳ ನಂತರ ಆ ಅಧಿಸೂಚನೆಗಳನ್ನು ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಹಿಂಪಡೆಯಲಾಗಿದೆ.

ವಿದ್ಯಾರ್ಥಿಗಳು ವಕೀಲರಾಗಿ ಕಾನೂನು ವೃತ್ತಿಯನ್ನು ನಿಯಂತ್ರಿಸುವ ಶಾಸನಬದ್ಧ ಚೌಕಟ್ಟಿನ ವ್ಯಾಪ್ತಿಗೆ ಬರುವ ಮುನ್ನ ಅವರ ಮೇಲೆ ನಿಯಂತ್ರಣ ಸಾಧಿಸಲು BCIಗೆ ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ವಿದ್ಯಾರ್ಥಿಗಳ ನಡವಳಿಕೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳುವುದಿದ್ದರೂ, ಅದು ಆಯಾ ಶಿಕ್ಷಣ ಸಂಸ್ಥೆಯು ತನ್ನ ನಿಯಮಗಳು ಮತ್ತು ನಿಬಂಧನೆಗಳ ಅಡಿಯಲ್ಲಿ ಪರಿಗಣಿಸಬೇಕಾದ ವಿಷಯವಾಗಿದೆ ಎಂದು ಅದು ಹೇಳಿದೆ.

ವಿಶ್ವವಿದ್ಯಾಲಯಕ್ಕೆ CJI ಕಾಂತ್ ಅವರ ಪ್ರಸ್ತಾವಿತ ಭೇಟಿಯ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ನಲ್ಸಾರ್‌ನ 2026ರ ಪದವೀಧರರನ್ನು ಮುಂದಿನ ಆದೇಶದವರೆಗೆ ವಕೀಲರನ್ನಾಗಿ ನೋಂದಾಯಿಸದಂತೆ ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ BCI ಸೂಚನೆ ನೀಡಿದ ನಂತರ ಆಗಸ್ಟ್ 14 ರಂದು ಈ ವಿವಾದ ಭುಗಿಲೆದ್ದಿತ್ತು.

Supreme Court
NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಈ ವಿಷಯವನ್ನು ಸುಪ್ರೀಂ ಕೋರ್ಟ್ ಮುಂದೆ ಪ್ರಸ್ತಾಪಿಸಿದಾಗ, BCI ಹಸ್ತಕ್ಷೇಪವನ್ನು CJI ಬಲವಾಗಿ ಆಕ್ಷೇಪಿಸಿದ್ದರು. ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ಮಾತುಕತೆ. ಮಧ್ಯಪ್ರವೇಶಿಸಲು ಅವರು (BCI) ಯಾರು? ಇದು ಸಂಪೂರ್ಣವಾಗಿ ಅನಗತ್ಯವಾದ ಕ್ರಮ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com