ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಶಾಸಕರು ಸದನದಿಂದ ಹೊರಕ್ಕೆ..!

ಸದನದ ಕಲಾಪ ಆರಂಭವಾಗುತ್ತಿದ್ದಂತೆ ಡಿಎಂಕೆ ವಿಪ್ ಇ.ವಿ. ವೇಲು ಅವರು ಸೋಮವಾರ ವಿಧಾನಸಭೆಯಲ್ಲಿ ವಿಜಯ್ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಇಡಿ ಆರೋಪಗಳ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದರು.
ief Minister C Joseph Vijay (L) and Leader of the Opposition Udhayanidhi Stalin.
ಸಿಎಂ ಜೋಸೆಫ್ ವಿಜಯ್ ಮತ್ತು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್.
Updated on

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ತೀವ್ರ ಗದ್ದಲ ಹಾಗೂ ಹೈಡ್ರಾಮಾ ನಡೆದಿದೆ. ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಡಿಎಂಕೆ ನಾಯಕರ ವಿರುದ್ಧ ಮಾಡಿದ ಭ್ರಷ್ಟಾಚಾರದ ಆರೋಪಗಳನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿರೋಧ ಪಕ್ಷದ (ಡಿಎಂಕೆ) ಶಾಸಕರನ್ನು ಸ್ಪೀಕರ್ ಆದೇಶದ ಮೇರೆಗೆ ಸದನದಿಂದ ಬಲವಂತವಾಗಿ ಹೊರಹಾಕಲಾಗಿದೆ.

ಸದನದ ಕಲಾಪ ಆರಂಭವಾಗುತ್ತಿದ್ದಂತೆ ಡಿಎಂಕೆ ವಿಪ್ ಇ.ವಿ. ವೇಲು ಅವರು ಸೋಮವಾರ ವಿಧಾನಸಭೆಯಲ್ಲಿ ವಿಜಯ್ ನೀಡಿದ್ದ ಹೇಳಿಕೆಯನ್ನು ಪ್ರಸ್ತಾಪಿಸಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಇಡಿ ಆರೋಪಗಳ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಒತ್ತಾಯಿಸಿದರು. ಇಂತಹ ಹೇಳಿಕೆಗಳು ಸದನದ ನಿಯಮಗಳು ಹಾಗೂ ಸಂಪ್ರದಾಯಗಳಿಗೆ ವಿರುದ್ಧವಾಗಿವೆ ಎಂದು ವಾದಿಸಿದರು.

ಸರ್ಕಾರಿಯಾ ಆಯೋಗದ ಉಲ್ಲೇಖಕ್ಕೂ ವೇಲು ಆಕ್ಷೇಪ ವ್ಯಕ್ತಪಡಿಸಿದರು. ಆಯೋಗವು ಯಾವುದೇ ಅಪರಾಧ ಸಾಬೀತಾಗಿಲ್ಲ ಎಂದು ಹೇಳಿತ್ತು ಎಂದು ತಿಳಿಸಿದರು.

ಪ್ರಕರಣಗಳು ಇನ್ನೂ ತನಿಖೆಯಲ್ಲಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಉತ್ತರ ನೀಡುವ ವೇಳೆ ಪ್ರಕರಣಗಳಿಗೆ ಸಂಬಂಧಿಸಿದ ವಿವರಗಳನ್ನು ಓದುವುದು ವಿಧಾನಸಭೆಯ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ವೇಲು ಹೇಳಿದರು.

ಪ್ರಕರಣಗಳನ್ನು ಓದುವುದು ಸದನದ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ನಿನ್ನೆ ಮುಖ್ಯಮಂತ್ರಿ ಅವರು ಮಿಸಾ ಮತ್ತು ಸರ್ಕಾರಿಯಾ ಆಯೋಗದ ಬಗ್ಗೆ ಮಾತನಾಡಿದರು. ಮುಖ್ಯಮಂತ್ರಿ ಉತ್ತರ ನೀಡುವ ವೇಳೆ ಜಾಗೃತಿ ಮತ್ತು ಭ್ರಷ್ಟಾಚಾರ ನಿಗ್ರಹ ಪ್ರಕರಣಗಳನ್ನು ಓದುವುದು ಸಂಪ್ರದಾಯ ಉಲ್ಲಂಘನೆಯಾಗಿದೆ. ತನಿಖೆಯಲ್ಲಿರುವ ಪ್ರಕರಣಗಳ ಕುರಿತು ಯಾವುದೇ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಡಿಎಂಕೆಯ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಆದವ್ ಅರ್ಜುನ, ತಾನು ವಿಧಾನಸಭೆಯಲ್ಲಿ ಮಾತನಾಡುವುದನ್ನು ತಡೆಯಲು ಡಿಎಂಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಆಡಳಿತ ಪಕ್ಷ ತನ್ನ ಮಾತನ್ನು ಮಾತ್ರ ಕೇಳಬೇಕು ಎಂದು ಡಿಎಂಕೆ ಬಯಸುತ್ತದೆ, ಆದರೆ, ವಿರೋಧ ಪಕ್ಷದ ಅಭಿಪ್ರಾಯಗಳನ್ನು ಕೇಳಲು ಸಿದ್ಧವಿಲ್ಲ ಎಂದು ಆರೋಪಿಸಿದರು.

ief Minister C Joseph Vijay (L) and Leader of the Opposition Udhayanidhi Stalin.
ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಗೆ ಭಾರಿ ಹಿನ್ನಡೆ: ಚುನಾವಣಾ ಅಕ್ರಮ ಆರೋಪ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್!

ಡಿಎಂಕೆಗೆ ನನ್ನ ಬಗ್ಗೆ ಭಯವಿದೆ. ನಾನು ಸದನದಲ್ಲಿ ಮಾತನಾಡಲು ಎದ್ದಾಗಲೆಲ್ಲಾ ಅವರು ಎದ್ದು ನಿಂತು ನನ್ನ ಮಾತನ್ನು ತಡೆಯಲು ವಿರೋಧಿಸುತ್ತಾರೆ. ಡಿಎಂಕೆಯ ಸಮಸ್ಯೆ ಏನೆಂದರೆ, ಆಡಳಿತ ಪಕ್ಷ ತನ್ನ ಮಾತನ್ನು ಕೇಳಬೇಕು ಎಂದು ಬಯಸುತ್ತದೆ. ಆದರೆ ಅದು ಇತರರ ಮಾತನ್ನು ಕೇಳಲು ಬಯಸುವುದಿಲ್ಲ ಎಂದು ಹೇಳಿದರು.

ಕಾನೂನು ಸಚಿವ ಆರ್. ನಿರ್ಮಲ್ ಕುಮಾರ್ ಅವರು ಮುಖ್ಯಮಂತ್ರಿ ವಿಜಯ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸರ್ಕಾರಿಯಾ ಆಯೋಗದ ವರದಿ ಹಾಗೂ ಇಡಿ ಅಧಿಕೃತ ದಾಖಲೆಗಳನ್ನು ಉಲ್ಲೇಖಿಸಿದ ಅವರು, ಅಂದಿನ ಡಿಎಂಕೆ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಪುನರುಚ್ಚರಿಸಿದರು.

ಸಿಎಂ ಹೇಳಿಕೆ ದಾಖಲೆಗಳಿಂದ ತೆಗೆಯುವಂತೆ ಡಿಎಂಕೆ ಒತ್ತಾಯ

ಇದೇ ವೇಳೆ ಡಿಎಂಕೆಯ ಬೇಡಿಕೆಯನ್ನು ಸ್ಪೀಕರ್ ಜೆ.ಸಿ.ಡಿ. ಪ್ರಭಾಕರ್ ತಿರಸ್ಕರಿಸಿದರು. ಮಿಸಾ ಕಾಯ್ದೆಗೆ ಸಂಬಂಧಿಸಿದ ಮುಖ್ಯಮಂತ್ರಿ ವಿಜಯ್ ಅವರ ಹೇಳಿಕೆಗಳನ್ನು ವಿಧಾನಸಭೆಯ ದಾಖಲೆಗಳಿಂದ ತೆಗೆದುಹಾಕುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ನಿನ್ನೆ ಮುಖ್ಯಮಂತ್ರಿ ವಿಜಯ್ ಅವರ ಭಾಷಣವನ್ನು ಒಂದು ನಿಮಿಷವೂ ಕೇಳಲು ಡಿಎಂಕೆ ಸಿದ್ಧವಾಗಿರಲಿಲ್ಲ. ಮಿಸಾ ಕಾಯ್ದೆಗೆ ಸಂಬಂಧಿಸಿದಂತೆ ಈ ಹಿಂದೆ ಸದನದಲ್ಲಿ ಪ್ರಸ್ತಾಪವಾಗಿದ್ದ ವಿಷಯಗಳನ್ನೇ ಮುಖ್ಯಮಂತ್ರಿ ಉಲ್ಲೇಖಿಸಿದ್ದಾರೆ. ಹೀಗಾಗಿ ಮಿಸಾ ಕಾಯ್ದೆ ಕುರಿತು ಮುಖ್ಯಮಂತ್ರಿಯವರ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆದುಹಾಕುವ ಅಗತ್ಯವಿಲ್ಲ” ಎಂದು ಸ್ಪೀಕರ್ ಹೇಳಿದರು.

ಡಿಎಂಕೆ ವಿರುದ್ಧ ಇಡಿ ಆರೋಪ ಉಲ್ಲೇಖಿಸಿದ್ದ ವಿಜಯ್

ಇದಕ್ಕೂ ಒಂದು ದಿನ ಮೊದಲು ಮುಖ್ಯಮಂತ್ರಿ ವಿಜಯ್ ಅವರು ಪಕ್ಷದ ನಿಧಿಯ ಹೆಸರಿನಲ್ಲಿ ಹಣ ಸಂಗ್ರಹಿಸಿರುವುದಕ್ಕೆ ಸಂಬಂಧಿಸಿದಂತೆ ಡಿಎಂಕೆ ವಿರುದ್ಧ ಇಡಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ ಎಂದು ಹೇಳಿದ್ದರು.

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಸಚಿವ ಸೆಂಥಿಲ್ ಬಾಲಾಜಿ ಅವರ ಹೆಸರುಗಳನ್ನು ಪಕ್ಷದ ನಿಧಿಯ ಹೆಸರಿನಲ್ಲಿ ಹಣ ಸಂಗ್ರಹಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಇಡಿ ಉಲ್ಲೇಖಿಸಿದೆ ಎಂದು ವಿಜಯ್ ಹೇಳಿದ್ದರು.

ಅಲ್ಲದೆ, ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸರ್ಕಾರಿಯಾ ಆಯೋಗದ ವರದಿ ಆರೋಪಿಸಿದೆ ಎಂದೂ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com