

ಕರೀಂನಗರ: ಪೊಲೀಸ್ ಠಾಣೆಯೊಂದರಲ್ಲಿ ನಿಲ್ಲಿಸಲಾಗಿದ್ದ ಗಸ್ತು ವಾಹನವೇ ಕಳುವಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಕರೀಂನಗರದಲ್ಲಿ ಈ ಘಟನೆ ನಡೆದಿದ್ದು, ಜನರಿಗೆ ರಕ್ಷಣೆ ಇನ್ನು ಎಲ್ಲಿ? ಎಂಬ ಅನುಮಾನ ಶುರುವಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕಳುವಾಗಿದ್ದ ವಾಹನವನ್ನು ಮಂಗಳವಾರ ಮುಂಜಾನೆ ಪತ್ತೆಹಚ್ಚಿ ವಶಕ್ಕೆ ಪಡೆಯಲಾಯಿತು ಎಂದು ಅವರು ಹೇಳಿದ್ದಾರೆ.
ಕರ್ತವ್ಯದ ನಂತರ ಗಸ್ತು ತಂಡ 'ಇನೋವಾ' ಕಾರನ್ನು ಕರೀಂನಗರ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿತ್ತು. ಬಳಿಕ ಠಾಣೆಯ ಆವರಣದಿಂದ ಕಾರು ನಾಪತ್ತೆಯಾಗಿರುವುದು ಕಂಡುಬಂದಿತು, ಇದರಿಂದಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಎಜಾಜ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.