ಹಿನ್ನೋಟ 2019: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೆಲೆಬ್ರಿಟಿಗಳು

ಸ್ಯಾಂಡಲ್ ವುಡ್ ಬೆಳ್ಳಿತೆರೆ ಹಾಗೂ ಕಿರುತೆರೆಯ ಹಲವು ಕಲಾವಿದರು 2019ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 2019ರ ವರ್ಷದಲ್ಲಿ ಬೆಳ್ಳಿತೆರೆ ಕಲಾವಿದರಿಗಿಂತಲೂ ಕಿರುತೆರೆ ಕಲಾವಿದರೇ ಹೆಚ್ಚಾಗಿ ಗೃಹಸ್ತಾಶ್ರಮ ಪ್ರವೇಶಿಸಿದ್ದಾರೆ. 
ಗುಳಿಕೆನ್ನೆಯ ಚೆಲುವ ವಿಜಯ್ ಸೂರ್ಯ ಅವರು ತಮ್ಮ ದೂರದ ಸಂಬಂಧಿ ಚೈತ್ರ ಅವರ ಜೊತೆಗೆ ಪ್ರೇಮಿಗಳ ದಿನದಂದೇ ವೈವಾಹಕ ಜೀವನಕ್ಕೆ ಕಾಲಿಟ್ಟರು.
ಗುಳಿಕೆನ್ನೆಯ ಚೆಲುವ ವಿಜಯ್ ಸೂರ್ಯ ಅವರು ತಮ್ಮ ದೂರದ ಸಂಬಂಧಿ ಚೈತ್ರ ಅವರ ಜೊತೆಗೆ ಪ್ರೇಮಿಗಳ ದಿನದಂದೇ ವೈವಾಹಕ ಜೀವನಕ್ಕೆ ಕಾಲಿಟ್ಟರು.
Updated on
ಮಿಸ್ಟರ್ ಆ್ಯಂಡ್ ಮಿಸೆಸ್ ರಂಗೇಗೌಡ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿರುವ ಅಮೃತಾ ರಾಮಮೂರ್ತಿ ಹಾಗೂ ರಘು ಅವರು ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಮಿಸ್ಟರ್ ಆ್ಯಂಡ್ ಮಿಸೆಸ್ ರಂಗೇಗೌಡ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿರುವ ಅಮೃತಾ ರಾಮಮೂರ್ತಿ ಹಾಗೂ ರಘು ಅವರು ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಆ ದಿನಗಳು ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೆಸರು ಮಾಡಿದ್ದ  ಅರ್ಚನಾ ವೇದಾ ಅವರು ತಮ್ಮ ಬಹುಕಾಲದ ಗೆಳೆಯ ಜಗದೀಶ್ ಅವರೊಂದಿಗೆ ನವೆಂಬರ್ 16 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಆ ದಿನಗಳು ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೆಸರು ಮಾಡಿದ್ದ ಅರ್ಚನಾ ವೇದಾ ಅವರು ತಮ್ಮ ಬಹುಕಾಲದ ಗೆಳೆಯ ಜಗದೀಶ್ ಅವರೊಂದಿಗೆ ನವೆಂಬರ್ 16 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುಬ್ಬಲಕ್ಷ್ಮಿ ಸಂಸಾರ ಧಾರಾವಹಿ ಖ್ಯಾತಿಯ ನಟ ಭವಾನಿ ಸಿಂಗ್ ಅವರು ತಮ್ಮ ಬಹುಕಾಲದ ಗೆಳತಿ ಪಂಕಜಾ ಎಂಬುವವರೊಂದಿಗೆ ನವೆಂಬರ್ 19ರಂದು ವಿವಾಹವಾದರು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುಬ್ಬಲಕ್ಷ್ಮಿ ಸಂಸಾರ ಧಾರಾವಹಿ ಖ್ಯಾತಿಯ ನಟ ಭವಾನಿ ಸಿಂಗ್ ಅವರು ತಮ್ಮ ಬಹುಕಾಲದ ಗೆಳತಿ ಪಂಕಜಾ ಎಂಬುವವರೊಂದಿಗೆ ನವೆಂಬರ್ 19ರಂದು ವಿವಾಹವಾದರು.
ರ್ಯಾಪರ್ ಚಂದನ್ ಶೆಟ್ಟಿಯವರು ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಅವರೊಂದಿಗೆ ಅಕ್ಟೋಬರ್ 21 ರಂದು ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.
ರ್ಯಾಪರ್ ಚಂದನ್ ಶೆಟ್ಟಿಯವರು ತಮ್ಮ ಆತ್ಮೀಯ ಗೆಳತಿ ಬಾರ್ಬಿ ಗರ್ಲ್ ನಿವೇದಿತಾ ಗೌಡ ಅವರೊಂದಿಗೆ ಅಕ್ಟೋಬರ್ 21 ರಂದು ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.
ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಅವರೊಂದಿಗೆ ನವೆಂಬರ್ 24 ರಂದು ವಿವಾಹ ಜೀವನಕ್ಕೆ ಕಾಲಿಟ್ಟರು.
ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಅವರೊಂದಿಗೆ ನವೆಂಬರ್ 24 ರಂದು ವಿವಾಹ ಜೀವನಕ್ಕೆ ಕಾಲಿಟ್ಟರು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕುಲವಧು ಧಾರಾವಾಹಿ ಮೂಲಕ ಮನೆ ಮಾತಾಗಿರುವ ಧನ್ಯಾ ಖ್ಯಾತಿಯ ದೀಪಿಕಾ ಅವರು, ತಮ್ಮ ಪ್ರಿಯಕರ ಅಕ್ಕು ಆಕರ್ಶ್ ಅವರೊಂದಿಗೆ ನವೆಂಬರ್ 15 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕುಲವಧು ಧಾರಾವಾಹಿ ಮೂಲಕ ಮನೆ ಮಾತಾಗಿರುವ ಧನ್ಯಾ ಖ್ಯಾತಿಯ ದೀಪಿಕಾ ಅವರು, ತಮ್ಮ ಪ್ರಿಯಕರ ಅಕ್ಕು ಆಕರ್ಶ್ ಅವರೊಂದಿಗೆ ನವೆಂಬರ್ 15 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಸಿಹಿಕಹಿ ಚಂದ್ರು ಅವರ ಪುತ್ರಿ ಹಿತಾ ಚಂದ್ರಶೇಖರ್ ಅವರು ತಮ್ಮ ಗೆಳೆಯ ಹಾಗೂ ನಟ ಕಿರಣ್ ಶ್ರೀನಿವಾಸ್ ಅವರೊಂದಿಗೆ ಡಿಸೆಂಬರ್ 1 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಸಿಹಿಕಹಿ ಚಂದ್ರು ಅವರ ಪುತ್ರಿ ಹಿತಾ ಚಂದ್ರಶೇಖರ್ ಅವರು ತಮ್ಮ ಗೆಳೆಯ ಹಾಗೂ ನಟ ಕಿರಣ್ ಶ್ರೀನಿವಾಸ್ ಅವರೊಂದಿಗೆ ಡಿಸೆಂಬರ್ 1 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿ ಸಾಕ್ಷಿ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಇಶಿತಾ ವರ್ಷಾ ಅವರು ತಮ್ಮ ಬಹುಕಾಲದ ಗೆಳೆಯ ಮುರುಗಾನಂದ್ ಅವರೊಂದಿಗೆ ನವೆಂಬರ್ 10 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿ ಸಾಕ್ಷಿ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಇಶಿತಾ ವರ್ಷಾ ಅವರು ತಮ್ಮ ಬಹುಕಾಲದ ಗೆಳೆಯ ಮುರುಗಾನಂದ್ ಅವರೊಂದಿಗೆ ನವೆಂಬರ್ 10 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಬಿಗ್ ಬಾಸ್ ಸೀಸನ್ 5ನೇ ಆವೃತ್ತಿಯ ಸ್ಪರ್ಧಿ ಹಾಗೂ ಕಿರುತೆರೆ ನಟ ಜಗನ್ನಾಥ್ ಚಂದ್ರಶೇಖರ್ ಅವರು ತಮ್ಮ ಆತ್ಮೀಯ ಗೆಳತಿ ರಕ್ಷಿತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಬಿಗ್ ಬಾಸ್ ಸೀಸನ್ 5ನೇ ಆವೃತ್ತಿಯ ಸ್ಪರ್ಧಿ ಹಾಗೂ ಕಿರುತೆರೆ ನಟ ಜಗನ್ನಾಥ್ ಚಂದ್ರಶೇಖರ್ ಅವರು ತಮ್ಮ ಆತ್ಮೀಯ ಗೆಳತಿ ರಕ್ಷಿತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಭಾರತ ಕ್ರಿಕೆಟ್ ತಂಡದ ಆಟಗಾರ ಮನೀಶ್ ಪಾಂಡೆಯವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ಆಶ್ರಿತಾ ಶೆಟ್ಟಿಯವರೊಂದಿಗೆ ಡಿಸೆಂಬರ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಭಾರತ ಕ್ರಿಕೆಟ್ ತಂಡದ ಆಟಗಾರ ಮನೀಶ್ ಪಾಂಡೆಯವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ಆಶ್ರಿತಾ ಶೆಟ್ಟಿಯವರೊಂದಿಗೆ ಡಿಸೆಂಬರ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ನಟಿ ನೇಹಾ ಪಾಟೀಲ್ ಅವರು ಬೆಂಗಳೂರಿನ ಎಂಜಿನಿಯರಿಂಗ್ ಹುಡುಗ ಪ್ರಣವ್ ಎಂಬುವವರ ಜೊತೆಗೆ ಫೆಬ್ರವರಿ 22 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ನಟಿ ನೇಹಾ ಪಾಟೀಲ್ ಅವರು ಬೆಂಗಳೂರಿನ ಎಂಜಿನಿಯರಿಂಗ್ ಹುಡುಗ ಪ್ರಣವ್ ಎಂಬುವವರ ಜೊತೆಗೆ ಫೆಬ್ರವರಿ 22 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರ ಸಹೋದರಿ ನಿತ್ಯಾರಾಮ್ ಅವರು ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಅವರೊಂದಿಗೆ ಖಾಸಗಿ ಹೋಟೆಲ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರ ಸಹೋದರಿ ನಿತ್ಯಾರಾಮ್ ಅವರು ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಅವರೊಂದಿಗೆ ಖಾಸಗಿ ಹೋಟೆಲ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಪುಟ್ಟಗೌರಿ ಮದುವೆ ಹಾಗೂ ಗಟ್ಟಿಮೇಳ ಧಾರಾವಾಹಿಯ ಖ್ಯಾತಿಯ ನಟ ರಕ್ಷ್ ಅವರು ತಮ್ಮ ಬಹುಕಾಲದ ಗೆಳತಿ ಅನುಷಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಪುಟ್ಟಗೌರಿ ಮದುವೆ ಹಾಗೂ ಗಟ್ಟಿಮೇಳ ಧಾರಾವಾಹಿಯ ಖ್ಯಾತಿಯ ನಟ ರಕ್ಷ್ ಅವರು ತಮ್ಮ ಬಹುಕಾಲದ ಗೆಳತಿ ಅನುಷಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಚಂದನವನದ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರಿ ಗೀತಾಂಜಲಿಯವರು ಉದ್ಯಮಿ ಅಜಯ್ ಅವರೊಂದಿಗೆ ವೈವಾಹಿಕ ಜೀನಕ್ಕೆ ಕಾಲಿಟ್ಟರು.
ಚಂದನವನದ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರಿ ಗೀತಾಂಜಲಿಯವರು ಉದ್ಯಮಿ ಅಜಯ್ ಅವರೊಂದಿಗೆ ವೈವಾಹಿಕ ಜೀನಕ್ಕೆ ಕಾಲಿಟ್ಟರು.
ಆಪರೇಷನ್ ಅಲಮೇಲಮ್ಮ ಮತ್ತು ಕವಲು ದಾರಿ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿಸಿರುವ ನಟ ರಿಷಿ ಅವರು ಬರಹಗಾರ್ತಿ ಸ್ವಾತಿಯವರೊಂದಿಗೆ ಚೆನ್ನೈನಲ್ಲಿ ನವೆಂಬರ್ 11 ರಂದು ವಿವಾಹವಾದರು.
ಆಪರೇಷನ್ ಅಲಮೇಲಮ್ಮ ಮತ್ತು ಕವಲು ದಾರಿ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿಸಿರುವ ನಟ ರಿಷಿ ಅವರು ಬರಹಗಾರ್ತಿ ಸ್ವಾತಿಯವರೊಂದಿಗೆ ಚೆನ್ನೈನಲ್ಲಿ ನವೆಂಬರ್ 11 ರಂದು ವಿವಾಹವಾದರು.
ಬಹುಭಾಷಾ ನಟಿ ಯಜ್ಞಾಶೆಟ್ಟಿಯವರು ಅಕ್ಟೋಬರ್ 10 ರಂದು ಸಿನಿರಂಗದ ನಾಯಕ ನಟ ಸಂದೀಪ್  ಶೆಟ್ಟಿಯವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಬಹುಭಾಷಾ ನಟಿ ಯಜ್ಞಾಶೆಟ್ಟಿಯವರು ಅಕ್ಟೋಬರ್ 10 ರಂದು ಸಿನಿರಂಗದ ನಾಯಕ ನಟ ಸಂದೀಪ್ ಶೆಟ್ಟಿಯವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ವರನಟ ಡಾ.ರಾಜ್ ಕುಮಾರ್ ವಂಶದ ಕುಡಿ ರಾಘವೇದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವರಾಜ್ ಕುಮಾರ್ ಅವರು ಮೈಸೂರೂ ಮೂಲದ ಶ್ರೀದೇವಿ ಎಂಬುವವರೊಂದಿಗೆ ಮೇ.26 ರಂದು ವಿವಾಹವಾದರು.
ವರನಟ ಡಾ.ರಾಜ್ ಕುಮಾರ್ ವಂಶದ ಕುಡಿ ರಾಘವೇದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವರಾಜ್ ಕುಮಾರ್ ಅವರು ಮೈಸೂರೂ ಮೂಲದ ಶ್ರೀದೇವಿ ಎಂಬುವವರೊಂದಿಗೆ ಮೇ.26 ರಂದು ವಿವಾಹವಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com