ಮುಹೂರ್ತ ಕಾರ್ಯಕ್ರಮದಲ್ಲಿ ಸಲಾರ್ ಸಿನಿಮಾ ತಂಡದವರಾದ ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್, ಪ್ರಭಾಸ್ ಮತ್ತು ವಿಶೇಷ ಅತಿಥಿ ಯಶ್ ಸೇರಿದಂತೆ ಅನೇಕರು ಹಾಜರಿದ್ದರು.
ಕೆಜಿಎಫ್ ಚಿತ್ರದಂತಹ ಬಿಗ್ ಬಜೆಟ್ ಇಂಡಿಯನ್ ಸಿನಿಮಾವನ್ನು ನಿರ್ಮಾಣ ಮಾಡಿದ್ದ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ನ ವಿಜಯ್ ಕಿರಗಂದೂರು ಅವರೇ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಾಲನೆ ನೀಡಲಾಯಿತು.
ಸಲಾರ್ ಚಿತ್ರತಂಡದ ಸಂಭ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಿದ್ದರು. ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು.
ಚಿತ್ರದ ನಾಯಕ ಪ್ರಭಾಸ್, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು, ತಾರೆಯರು ಪಾಲ್ಗೊಂಡು ಶುಭ ಹಾರೈಸಿದರು.
'ಸಲಾರ್' ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿ ಹೊರಹೊಮ್ಮಿದೆ.