ಕಾರವಾರದ ಕದಂಬ ನೌಕಾನೆಲೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
ರಾಜನಾಥ್ ಸಿಂಗ್ ಇಂದು ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು. ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ಕಾಮಗಾರಿಗಳನ್ನು ಪರಿಶೀಲಿಸಿ, ನೌಕಾಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಒಂದಷ್ಟು ಹೊತ್ತು ಕಾಲಕಳೆದರು.
ರಾಜನಾಥ್ ಸಿಂಗ್ ಇಂದು ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯೊಂದಿಗೆ ಯೋಗ ಅಧಿವೇಶನದಲ್ಲಿ ಭಾಗವಹಿಸಿದರು.
ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ಕಾಮಗಾರಿಗಳನ್ನು ಪರಿಶೀಲಿಸಿ, ನೌಕಾಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಒಂದಷ್ಟು ಹೊತ್ತು ಕಾಲಕಳೆದರು.
ಐಎನ್ಎಸ್ ಖಂಡೇರಿ ಭಾರತದ ಮೇಕ್ ಇನ್ ಇಂಡಿಯಾ ಉಪಕ್ರಮದ ಪ್ರಾಜೆಕ್ಟ್ 75 ಜಲಾಂತರ್ಗಾಮಿ ನೌಕೆಗಳಲ್ಲಿ ಎರಡನೆಯದ್ದಾಗಿದೆ. 2019ರಲ್ಲಿ ಈ ಸಬ್ ಮೆರಿನ್ ನ್ನು ರಾಜನಾಥ್ ಸಿಂಗ್ ಅವರೇ ಲೋಕಾರ್ಪಣೆ ಮಾಡಿದ್ದರು.
ಇಂದು ಮಧ್ಯಾಹ್ನ ನೌಕಾಪಡೆಯ ಪ್ರಮುಖರೊಂದಿಗೆ ಸಬ್ ಮೆರಿನ್ ಹಾಗೂ ಐಎನ್ಎಸ್ ವಿಕ್ರಮಾದಿತ್ಯವನ್ನೇರಿ ನೌಕಾಯಾನ ನಡೆಸಿದರು.
ಇಂಡಿಯನ್ ನೇವಿಗಾಗಿ ತಯಾರಾಗುತ್ತಿರುವ 41 ಶಿಪ್ ಹಾಗೂ ಸಬ್ ಮರೀನ್ಗಳ ಪೈಕಿ 39 ಭಾರತದಲ್ಲೇ ತಯಾರಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.