ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತೆಲುಗಿನಲ್ಲಿರುವ ರಂಗನಾಥ ರಾಮಾಯಣದ ಪದ್ಯಗಳನ್ನೂ ಆಲಿಸಿದರು.
ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ.
Updated on
ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟಿದ್ದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟಿದ್ದರು.
ಈ ವೇಳೆ ಪ್ರಧಾನಿ ಮೋದಿ ತೆಲುಗಿನಲ್ಲಿರುವ ರಂಗನಾಥ ರಾಮಾಯಣದ ಪದ್ಯಗಳನ್ನೂ ಆಲಿಸಿದರು.
ಈ ವೇಳೆ ಪ್ರಧಾನಿ ಮೋದಿ ತೆಲುಗಿನಲ್ಲಿರುವ ರಂಗನಾಥ ರಾಮಾಯಣದ ಪದ್ಯಗಳನ್ನೂ ಆಲಿಸಿದರು.
ರಾಮಾಯಣ ಹಾಗೂ ಶಿವನ ಕತೆಗಳಿಗೆ ಕುರುಹಾಗಿ ನಿಂತಿರುವ ಲೇಪಾಕ್ಷಿ ಅದ್ಭುತ ಶಿಲ್ಪಕಲೆಗಳ ತವರೂರು.
ರಾಮಾಯಣ ಹಾಗೂ ಶಿವನ ಕತೆಗಳಿಗೆ ಕುರುಹಾಗಿ ನಿಂತಿರುವ ಲೇಪಾಕ್ಷಿ ಅದ್ಭುತ ಶಿಲ್ಪಕಲೆಗಳ ತವರೂರು.
ತಾಯಿ ಸೀತೆಯನ್ನು ಅಪಹರಿಸುತ್ತಿದ್ದ ರಾವಣನೊಂದಿಗೆ ಹೋರಾಡಿದ ಜಟಾಯು ತೀವ್ರವಾಗಿ ಗಾಯಗೊಂಡ ನಂತರ ಬಿದ್ದ ಸ್ಥಳವೇ ಲೇಪಾಕ್ಷಿ ಎಂದು ಹೇಳಲಾಗುತ್ತದೆ.
ತಾಯಿ ಸೀತೆಯನ್ನು ಅಪಹರಿಸುತ್ತಿದ್ದ ರಾವಣನೊಂದಿಗೆ ಹೋರಾಡಿದ ಜಟಾಯು ತೀವ್ರವಾಗಿ ಗಾಯಗೊಂಡ ನಂತರ ಬಿದ್ದ ಸ್ಥಳವೇ ಲೇಪಾಕ್ಷಿ ಎಂದು ಹೇಳಲಾಗುತ್ತದೆ.
ಸಾಯುವ ಹಂತದಲ್ಲಿ ಇಲ್ಲಿ ಬಿದ್ದ ಜಟಾಯುವನ್ನು ನೋಡಿದ ರಾಮ, ಸ್ಥಳೀಯ ಭಾಷೆಯಲ್ಲಿ ಎದ್ದೇಳು ಪಕ್ಷಿಯೇ ಎನ್ನಲು 'ಲೇ ಪಕ್ಷಿ' ಎನ್ನುತ್ತಾನೆ. ನಂತರದ ದಿನಗಳಲ್ಲಿ ಇದೇ ಲೇಪಾಕ್ಷಿಯಾಗುತ್ತದೆ.
ಸಾಯುವ ಹಂತದಲ್ಲಿ ಇಲ್ಲಿ ಬಿದ್ದ ಜಟಾಯುವನ್ನು ನೋಡಿದ ರಾಮ, ಸ್ಥಳೀಯ ಭಾಷೆಯಲ್ಲಿ ಎದ್ದೇಳು ಪಕ್ಷಿಯೇ ಎನ್ನಲು 'ಲೇ ಪಕ್ಷಿ' ಎನ್ನುತ್ತಾನೆ. ನಂತರದ ದಿನಗಳಲ್ಲಿ ಇದೇ ಲೇಪಾಕ್ಷಿಯಾಗುತ್ತದೆ.
ಅಲ್ಲಿಗೆ ಭೇಟಿ ನೀಡಿದ ರಾಮನಿಗೆ ಮಾತೆ ಸೀತೆಯನ್ನು ರಾವಣನು ದಕ್ಷಿಣಕ್ಕೆ ಕರೆದೊಯ್ದನೆಂದು ಹೇಳಿ ಜಟಾಯುವು ಇದೇ ಜಾಗದಲ್ಲಿ ಮೋಕ್ಷವನ್ನು ಪಡೆಯುತ್ತಾನೆ.
ಅಲ್ಲಿಗೆ ಭೇಟಿ ನೀಡಿದ ರಾಮನಿಗೆ ಮಾತೆ ಸೀತೆಯನ್ನು ರಾವಣನು ದಕ್ಷಿಣಕ್ಕೆ ಕರೆದೊಯ್ದನೆಂದು ಹೇಳಿ ಜಟಾಯುವು ಇದೇ ಜಾಗದಲ್ಲಿ ಮೋಕ್ಷವನ್ನು ಪಡೆಯುತ್ತಾನೆ.
ಇನ್ನು ಇಲ್ಲಿ 8 ಅಡಿ ಉದ್ದದ ಪಾದದ ಗುರುತೊಂದನ್ನು ಕಾಣಬಹುದಾಗಿದ್ದು, ಇದು ಸೀತಾ ಮಾತೆಯ ಪಾದದ ಗುರುತು ಎಂದು ನಂಬಲಾಗಿದೆ. ಗುಪ್ತ ಮೂಲದಿಂದ ಬಂದ ನೀರು ಇಲ್ಲಿ ಯಾವಾಗಲೂ ಇರುತ್ತದೆ.
ಇನ್ನು ಇಲ್ಲಿ 8 ಅಡಿ ಉದ್ದದ ಪಾದದ ಗುರುತೊಂದನ್ನು ಕಾಣಬಹುದಾಗಿದ್ದು, ಇದು ಸೀತಾ ಮಾತೆಯ ಪಾದದ ಗುರುತು ಎಂದು ನಂಬಲಾಗಿದೆ. ಗುಪ್ತ ಮೂಲದಿಂದ ಬಂದ ನೀರು ಇಲ್ಲಿ ಯಾವಾಗಲೂ ಇರುತ್ತದೆ.
ಇದೇ ಲೇಪಾಕ್ಷಿ ವೀರಭದ್ರಸ್ವಾಮಿ ದೇವಾಲಯದಲ್ಲಿ ಶಿವ ಪಾರ್ವತಿ ವಿವಾಹಕ್ಕಾಗಿ ನಿರ್ಮಿಸಿದ ಕಲ್ಯಾಣ ಮಂಟಪವನ್ನೂ ಕಾಣಬಹುದು. ಕಾರಣಾಂತರಗಳಿಂದ ಇಲ್ಲಿ ವಿವಾಹವಾಗಲಿಲ್ಲ ಎಂದು ಹೇಳಲಾಗಿದೆ.
ಇದೇ ಲೇಪಾಕ್ಷಿ ವೀರಭದ್ರಸ್ವಾಮಿ ದೇವಾಲಯದಲ್ಲಿ ಶಿವ ಪಾರ್ವತಿ ವಿವಾಹಕ್ಕಾಗಿ ನಿರ್ಮಿಸಿದ ಕಲ್ಯಾಣ ಮಂಟಪವನ್ನೂ ಕಾಣಬಹುದು. ಕಾರಣಾಂತರಗಳಿಂದ ಇಲ್ಲಿ ವಿವಾಹವಾಗಲಿಲ್ಲ ಎಂದು ಹೇಳಲಾಗಿದೆ.
ಇಲ್ಲಿರುವ ಏಳು ಹೆಡೆಯ ನಾಗವು ಶಿವಲಿಂಗಕ್ಕೆ ಸುತ್ತಿರುವಂಥ ನಾಗಲಿಂಗ ಶಿಲ್ಪವು ಜನಪ್ರಿಯವಾಗಿದೆ.
ಇಲ್ಲಿರುವ ಏಳು ಹೆಡೆಯ ನಾಗವು ಶಿವಲಿಂಗಕ್ಕೆ ಸುತ್ತಿರುವಂಥ ನಾಗಲಿಂಗ ಶಿಲ್ಪವು ಜನಪ್ರಿಯವಾಗಿದೆ.
ಇವೆಲ್ಲವುಗಳ ಹೊರತಾಗಿ ದೇಶದಲ್ಲೇ ಅತಿ ದೊಡ್ಡ ನಂದಿ ವಿಗ್ರಹವನ್ನು ಕೂಡಾ ಇಲ್ಲಿ ಕಾಣಬಹುದು.
ಇವೆಲ್ಲವುಗಳ ಹೊರತಾಗಿ ದೇಶದಲ್ಲೇ ಅತಿ ದೊಡ್ಡ ನಂದಿ ವಿಗ್ರಹವನ್ನು ಕೂಡಾ ಇಲ್ಲಿ ಕಾಣಬಹುದು.
ಆ೦ಧ್ರಪ್ರದೇಶದ ಅನ೦ತಪುರ ಜಿಲ್ಲೆಯಲ್ಲಿರುವ ಹಿ೦ದೂಪುರ್ ನಿ೦ದ 15 ಕಿ.ಮೀ. ಗಳಷ್ಟು ದೂರದಲ್ಲಿ ಮತ್ತು ಬೆ೦ಗಳೂರು ನಗರದಿ೦ದ ಸರಿಸುಮಾರು 120 ಕಿ.ಮೀ. ಗಳಷ್ಟು ದೂರದಲ್ಲಿದೆ ಲೇಪಾಕ್ಷಿ.
ಆ೦ಧ್ರಪ್ರದೇಶದ ಅನ೦ತಪುರ ಜಿಲ್ಲೆಯಲ್ಲಿರುವ ಹಿ೦ದೂಪುರ್ ನಿ೦ದ 15 ಕಿ.ಮೀ. ಗಳಷ್ಟು ದೂರದಲ್ಲಿ ಮತ್ತು ಬೆ೦ಗಳೂರು ನಗರದಿ೦ದ ಸರಿಸುಮಾರು 120 ಕಿ.ಮೀ. ಗಳಷ್ಟು ದೂರದಲ್ಲಿದೆ ಲೇಪಾಕ್ಷಿ.
ಅಯೋಧ್ಯೆ ರಾಮಮಂದಿರ ಉದ್ಘಧಾಟನೆಗೆ ಕೇವಲ ಇನ್ನು 6 ದಿನ ಮಾತ್ರ ಬಾಕಿ ಉಳಿದಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಲೇಪಾಕ್ಷಿಗೆ ಭೇಟಿ ನೀಡಿದ್ದಾರೆ.
ಅಯೋಧ್ಯೆ ರಾಮಮಂದಿರ ಉದ್ಘಧಾಟನೆಗೆ ಕೇವಲ ಇನ್ನು 6 ದಿನ ಮಾತ್ರ ಬಾಕಿ ಉಳಿದಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಲೇಪಾಕ್ಷಿಗೆ ಭೇಟಿ ನೀಡಿದ್ದಾರೆ.
ಲೇಪಾಕ್ಷಿ ದೇಗುಲ
ಲೇಪಾಕ್ಷಿ ದೇಗುಲ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com