ಕಲಬುರಗಿ: ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ವಿಧಾನಸೌಧದ ಹೊರಗಡೆ 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
Advertisement