ನಗರದಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ
ನಗರದಲ್ಲಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಒಂದೆಡೆ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.
Published on

ಬೆಂಗಳೂರು: ಒಂದೆಡೆ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್ ಸೋನಿಯಾ ಗಾಂಧಿಯವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಗಿರಿರಾಜ್ ಸಿಂಗ್ ರನ್ನು ವಜಾ ಮಾಡುವಂತೆ ಒತ್ತಾಯಿಸಿದ್ದು ಅಲ್ಲದೆ ಗಿರಿರಾಜ್ ಸಿಂಗ್ ರ ಪ್ರತಿಕೃತಿಯನ್ನು ದಹಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಖಾಸಗಿ ಮಾಧ್ಯಮದೊಂದಿಗೆ ಗಿರಿರಾಜ್ ಸಿಂಗ್ ಮಾತನಾಡಿದ ವೇಳೆ, ರಾಜೀವ್ ಗಾಂಧಿ ನೈಜಿರಿಯಾ ಮಹಿಳೆಯನ್ನೇನಾದರೂ ಮದುವೆಯಾಗಿದ್ದರೆ ಅಥವಾ ಸೋನಿಯಾ ಗಾಂಧಿಯವರು ಬೆಳ್ಳಗಿರದಿದ್ದರೆ ಕಾಂಗ್ರೆಸ್ ಪಕ್ಷ ಸೋನಿಯಾ ಅವರನ್ನು ಅಧ್ಯಕ್ಷೆಯಾಗಿ ಒಪ್ಪಿಕೊಳ್ಳುತ್ತಿತ್ತ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com