ಬೆಂಗಳೂರು: ಎಪಿಎಲ್ ಕಾರ್ಡ್ದಾರರಿಗೆ ಜೂನ್ 1ರಿಂದ ರಿಯಾಯ್ತಿ ದರದಲ್ಲಿ ಅಕ್ಕಿ ಕೊಡುವ ಯೋಜನೆ ಜಾರಿಗೆ ಬರುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಎಪಿಎಲ್ ಪಡಿತರ ಚೀಟಿದಾರರು ಮೊದಲು ತಮ್ಮ ಹೆಸರನ್ನು ಮೊದಲು ನೋಂದಣಿ ಮಾಡಿಕೊಳ್ಳ ಬೇಕಾಗುತ್ತದೆ. ಮೇ 1ರಿಂದ ನೋಂದಣಿ ಕಾರ್ಯ ಆರಂಭವಾಗುತ್ತದೆ. ಇದಕ್ಕೆ ಕನಿಷ್ಠ ಒಂದು ತಿಂಗಳು ಸಮಯ ಬೇಕು. ಎಲ್ಲಎಪಿಎಲ್ ಪಡಿತರ ಚೀಟಿದಾರರು ಅಕ್ಕಿ ಮತ್ತು ಗೋದಿ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಇರುತ್ತದೆ. ಯಾರಿಗೆ ಅಗತ್ಯವಿರು ತ್ತದೆಯೋ ಅವರು ಪಡೆಯತ್ತಾರೆ. 19 ಲಕ್ಷ ಎಪಿಎಲ್ ಪಡಿತರ ಚೀಟಿದಾರರು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.
Advertisement