ಬೆಂಗಳೂರು: ಸದಾ ಜನಜಗುಳಿಯಿಂದ ಕೂಡಿದ್ದ ಕಚೇರಿಯಲ್ಲಿ ಈಗ ನೀರವ ಮೌನ. ಜನರ ಕಷ್ಟ, ನೋವುಗಳಿಗೆ ಸ್ಪಂದಿಸಬೇಕಾದ, ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾದ ಸಂಸ್ಥೆ ಇಂದು ಒಡೆಯನಿಲ್ಲದ ಮನೆಯಂತಾಗಿದೆ. ಸಿಬ್ಬಂದಿ ಮೌನಕ್ಕೆ ಶರಣಾಗಿದ್ದಾರೆ. ಭ್ರಷ್ಟ ಅಧಿಕಾರಿಗಳಿಗೆ, ದುರಾಡಳಿತಗಾರರಿಗೆ ಒಂದು ಕಾಲದಲ್ಲಿ ಸಿಂಹ ಸ್ವಪ್ನವಾಗಿದ್ದ ಲೋಕಾಯುಕ್ತ ಕಚೇರಿ ಬುಧವಾರ ಕಂಡಿದ್ದು ಹೀಗೆ. ಹೌದು, ಲೋಕಾಯುಕ್ತ ಕಚೇರಿಯಲ್ಲಿ ಇಂದು ದೂರುದಾರರೇ ಇಲ್ಲ. ಲೋಕಾಯುಕ್ತ ಪೊಲೀಸರು ನಡೆಸುವ ದಾಳಿ ಪ್ರಮಾಣವೂ ಕ್ಷೀಣಿಸಿದೆ. ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪದ ಅಡಿ ಅಶ್ವಿನ್ ರಾವ್ ಬಂಧನ ಆಗಿದ್ದು ಜುಲೈ 28. ಅಂದಿನಿಂದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಅಡಿ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು, ಅಲ್ಲೊಂದು ಇಲ್ಲೊಂದು ಸಣ್ಣ-ಪುಟ್ಟ ದಾಳಿ ನಡೆಸಿದ್ದನ್ನು ಬಿಟ್ಟರೆ ಯಾವುದೇ ಮಹತ್ವದ ಬೆಳವಣಿಗೆ ಇಲ್ಲ. ಇನ್ನು ಲೋಕಾಯುಕ್ತ ಅಥವಾ ಉಪಲೋಕಾಯುಕ್ತರು ಸ್ಥಳಕ್ಕೆ ಹೋಗಿ ದಾಳಿ ಮಾಡಿದ ಉದಾಹರಣೆಗಳೂ