ರಾಜಕೀಯ
ಅಕ್ರಮ ಗಣಿಗಾರಿಕೆ: ಸುಪ್ರೀಂ ಕದ ತಟ್ಟಲಿರುವ ಹಿರೇಮಠ್
ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್.ಆರ್ ಹಿರೇಮಠ್...
ಬೆಂಗಳೂರು: ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಸಮಾಜ ಪರಿವರ್ತನಾ ಸಮುದಾಯ ಮುಖ್ಯಸ್ಥ ಎಸ್.ಆರ್ ಹಿರೇಮಠ್, ಅಕ್ರಮ ಗಣಿ ತನಿಖೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಅಕ್ರಮ ಗಣಿ ಪ್ರಕರಣದ ಆರೋಪಿಗಳು ಬೇರೆ ಬೇರೆ ಹಂತಗಳಲ್ಲಿ ಅರ್ಜಿಗಳನ್ನು ಹಾಕಿಕೊಂಡು ವಿಚಾರಣೆಯನ್ನು ಮುಂದೂಡುವ ಪ್ರಯತ್ನ ಮಾಡುತ್ತಿದ್ದಾರೆ.
ಹೀಗಾಗಿ ಇದಕ್ಕೆ ಅವಕಾಶ ನೀಡದಂತೆ, ಅಕ್ರಮ ಗಣಿಕಾರಿಕೆ ಕುರಿತು ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡಲಾಗುವುದು. ದೈನಂದಿನ ವಿಚಾರಣೆ ನಡೆಸುವುದಕ್ಕಾಗಿ ಈ ಮಧ್ಯಂತರ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.