ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತೀಯ ಜನತಾ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಮೈಸೂರು: ಅರ್ಕಾವತಿ ಬಡಾವಣೆ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತೀಯ ಜನತಾ ಪಕ್ಷ(ಬಿಜೆಪಿ)ದವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಗುರುವಾರ ಕಿಡಿಕಾರಿದ್ದಾರೆ.

ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ ಡಿನೋಟಿಫಿಕೇಷನ್ ಆಗಿರುವುದು. ನನ್ನ ಅವಧಿಯಲ್ಲಿ ರಿಮಾಡಿಫಿಕೇಷನ್ ಆಗಿದೆ, ಡಿನೋಟಿಫಿಕೇಷನ್ ಆಗಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.

ಕೆಂಪಯ್ಯ ಆಯೋಗ ರಚಿಸಿರೋದೆ ದೂರು ನೀಡುವುದಕ್ಕೆ, ದೂರುಗಳು, ದಾಖಲೆಗಳು ಇದ್ದರೆ ಅದನ್ನು ಆಯೋಗಕ್ಕೆ ನೀಡಲಿ. ಸುಳ್ಳು ಆರೋಪ ಮಾಡುವುದರಿಂದ ಏನು ಪ್ರಯೋಜನವಾಗಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com