ಪಾಟ್ನಾ: ಮಾಜಿ ಪಿಎಂ ಎಚ್.ಡಿ ದೇವೇಗೌಡ ದೇಶದ ಮೊದಲ ಹಿಂದುಳಿದ ವರ್ಗಗಳ ಸಮುದಾಯದ ಪ್ರಧಾನಮಂತ್ರಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುವುದಕ್ಕೂ ಹಿಂದುಳಿದ ವರ್ಗಗಳ ಸಮುದಾಯದಿಂದ ಪ್ರಧಾನ ಮಂತ್ರಿಯಾಗಿ ಕೆಲಸ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಮಾತ್ರ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದರು. ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿರುವ ನಿತೀಶ್ ಕುಮಾರ್ ಬಿಜೆಪಿಗೆ ದೇಶದ ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಬಿಜೆಪಿಗೆ ಕೇವಲ ಅಧಿಕಾರ ಮಾತ್ರ ಬೇಕು ಎಂದು ಆರೋಪಿಸಿದ್ದಾರೆ. ಧರ್ಮದ ಆಧಾರದ ಮೇಲೆ ಸಮಾಜ ಒಡೆಯುವ ಕೆಲಸ ಬಿಜೆಪಿ ತತ್ವ ಸಿದ್ಧಾಂತಗಳಲ್ಲಿ ಒಂದಾಗಿದೆ ಎಂದು ದೂರಿದ್ದಾರೆ.
Advertisement