ರಾಜ್ಯಪಾಲರು ದುಂದುವೆಚ್ಚ ಮಾಡುತ್ತಿಲ್ಲ: ಶೆಟ್ಟರ್

ರಾಜ್ಯಪಾಲ ವಜುಬಾಯಿ ವಾಲಾ ದುಂದುವೆಚ್ಚ ಮಾಡುತ್ತಿದ್ದಾರೆಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಸರ್ಕಾರಿ ಕಾರ್ಯಕ್ರಮಗಳಿಗಾಗಿ..
ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್
ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯಪಾಲ ವಜುಬಾಯಿ ವಾಲಾ ದುಂದುವೆಚ್ಚ ಮಾಡುತ್ತಿದ್ದಾರೆಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಅವರು ಸರ್ಕಾರಿ ಕಾರ್ಯಕ್ರಮಗಳಿಗಾಗಿ ಪ್ರವಾಸ ಮಾಡುತ್ತಿದ್ದಾರೆಯೇ ವಿನಃ ಖಾಸಗಿ ಕಾರ್ಯಕ್ರಮದಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಪಾಲರು ಸರ್ಕಾರಿ ಕಾರ್ಯಕ್ರಮಗಳಲ್ಲಿಯೇ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಕಡಿಮೆ. ಅವರು ಪ್ರವಾಸದ ಹೆಸರಲ್ಲಿ ಮೋಜು ಮಸ್ತಿ ಮಾಡುತ್ತಿಲ್ಲ.

ಹೀಗಿರುವಾಗಲೂ ವಿನಾಕಾರಣ ಅವರು ಪ್ರವಾಸಕ್ಕಾಗಿ ಈ ವರೆಗೆ ರು.5ರಿಂದ 6 ಕೋಟಿ ಖರ್ಚು ಮಾಡಿದ್ದಾರೆ ಎಂದು ಗುಲ್ಲು ಹಬ್ಬಿಸಿರುವುದು ಸರಿಯಲ್ಲ .ಇದು ಆಗದವ ಮೊಸರಲ್ಲಿ ಕಲ್ಲು ಹುಡುಕಿದಂತಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com