ಟಿಪ್ಪು ಹುತಾತ್ಮ ದಿನಕ್ಕೆ ರಜೆ

ಟಿಪ್ಪು ಸುಲ್ತಾನ್ ಹುತಾತ್ಮ ದಿನವಾದ ಮೇ 4ರಂದು ರಾಜ್ಯ ಸರ್ಕಾರ ರಜೆ ಘೋಷಿಸುವ ಕುರಿತು ಮುಖ್ಯಮಂತ್ರಿ ಸಕಾರಾತ್ಮಕವಾಗಿ...
ರೋಷನ್ ಬೇಗ್
ರೋಷನ್ ಬೇಗ್
Updated on

ಬೆಂಗಳೂರು: ಟಿಪ್ಪು ಸುಲ್ತಾನ್ ಹುತಾತ್ಮ ದಿನವಾದ ಮೇ 4ರಂದು ರಾಜ್ಯ ಸರ್ಕಾರ ರಜೆ ಘೋಷಿಸುವ ಕುರಿತು ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ವಾರ್ತಾ ಸಚಿವ ರೋಷನ್ ಬೇಗ್ ಭರವಸೆ ನೀಡಿದ್ದಾರೆ. ಟಿಪ್ಪು ಸುಲ್ತಾನ್ ಹುತಾತ್ಮ ದಿನದಂದು ರಾಜ್ಯ ಸರ್ಕಾರ ರಜೆ ಸೇರಿ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಕೋರಿ ವೀರ ಕನ್ನಡಿಗ ಟಿಪ್ಪು ಸೇನೆ ಹಮ್ಮಿಕೊಂಡಿದ್ದ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶಕ್ಕಾಗಿ ತನ್ನ ಮಕ್ಕಳನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶ ಭಕ್ತ ಟಿಪ್ಪು ಸುಲ್ತಾನ್. ಅವರ ಹುತಾತ್ಮ ದಿನಾಚಾರಣೆ ರಾಜ್ಯ ಸರ್ಕಾರ ರಜೆ ಘೋಷಿಸಬೇಕೆಂಬ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ.
ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ. ಅಲ್ಲದೇ ಈಗಾಗಲೇ ಟಿಪ್ಪು ಸುಲ್ತಾನ್ ಜನ್ಮ ದಿನಾಚಾರಣೆಯನ್ನು ಸರ್ಕಾರ ಆಚರಿಸುವ ಕುರಿತು ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ. ಈ ಕುರಿತು ಮುಂದಿನ ದಿನದಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಹೇಳಿದರು. ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮಿ ಮಾತನಾಡಿ, ಟಿಪ್ಪು ಸುಲ್ತಾನ್ ಒರ್ವ ಆದರ್ಶ ಪುರುಷನಾಗಿದ್ದು, ಆತನ ಮೇಲಿನ ತಪ್ಪು ಕಲ್ಪನೆ ದೂರವಾಗಬೇಕು. ಸರ್ಕಾರ ಟಿಪ್ಪುವಿನ ಬಗ್ಗೆ ಜನರಿಗೆ ತಿಳಿಸುವ ಪ್ರಯತ್ನ ಮಾಡುವ ಮೂಲಕ ಮಾನವೀಯ  ಮೌಲ್ಯವನ್ನು ಜಗತ್ತಿಗೆ ಪರಿಚಯಿಸಬೇಕು ಎಂದು ಹೇಳಿದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com