ಪರಿಷತ್ ಚುನಾವಣೆ: ಕಾಂಗ್ರೆಸ್ ಜತೆ ಮೈತ್ರಿಗೆ ದೇವೇಗೌಡರ ಸಮ್ಮತಿ

ಮುಂದಿನ ತಿಂಗಳ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ...
ಎಚ್ ಡಿ ದೇವೇಗೌಡ
ಎಚ್ ಡಿ ದೇವೇಗೌಡ

ಬೆಂಗಳೂರು: ಮುಂದಿನ ತಿಂಗಳ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಮ್ಮತಿ ಸೂಚಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಸ್ಪಷ್ಟನೆ ನೀಡಿದ ಜೆಡಿಎಸ್ ಶಾಸಕ ಚೆಲುವರಾಯಸ್ವಾಮಿ ಅವರು, ದೇವೇಗೌಡರ ಅಣಿತಿಯಂತೆಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರೊಂದಿಗೆ ಮೈತ್ರಿ ಕುರಿತು ಚರ್ಚಿಸಿದ್ದೇವೆ ಎಂದರು.

ಮೈತ್ರಿ ಒಪ್ಪಂದದ ಕುರಿತು ನಿರ್ಧರಿಸುವುದಕ್ಕೆ ಕಾಂಗ್ರೆಸ್ ನಾಯಕರಿಗೆ ನಾಲ್ಕು ದಿನಗಳ ಕಾಲಾವಕಾಶ ನೀಡಲಾಗಿದ್ದು, ಒಂದು ವೇಳೆ ಮೈತ್ರಿ ಮಾಡಿಕೊಳ್ಳಲು ಒಪ್ಪದಿದ್ದರೆ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಚೆಲುವರಾಯಸ್ವಾಮಿ ತಿಳಿಸಿದರು.

ನಿವೃತ್ತಿಯಾಗುತ್ತಿರುವ ತನ್ನ 5  ಸದಸ್ಯರೊಂದಿಗೆ ಹೆಚ್ಚುವರಿ 2 ಸ್ಥಾನಗಳಲ್ಲಿ  ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಅಲ್ಲದೆ ಇದಕ್ಕೆ ಬೆಂಬಲ ನೀಡಬೇಕೆಂದು ಕಾಂಗ್ರೆಸ್ ಗೆ ಮನವಿ ಸಹ ಮಾಡಿದೆ. ಇದಕ್ಕೆ ಕಾಂಗ್ರೆಸ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com