ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿಯಾದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಮಾತುಕತೆ ನಡೆಸಿದರು. ಆದರೆ ಮಾತುಕತೆ ಮುಗಿಸಿ ಹೊರ ಬಂದ ರಮ್ಯಾ ಕಣ್ಣಲ್ಲಿ ನೀರು ತುಂಬಿತ್ತು.
ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್. ಎಂ ಕೃಷ್ಣ ನಿವಾಸಕ್ಕೆ ಆಗಮಿಸಿದ ರಮ್ಯಾ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ನಂತರ ಹೊರಬರುವ ವೇಳೆ ಕಣ್ಣಂಚಲ್ಲಿ ನೀರು ತುಂಬಿ ಕೊಂಡಿದ್ದ ರಮ್ಯಾ ಭಾವುಕರಾಗಿದ್ದರು.
ಯಾವ ವಿಚಾರಕ್ಕಾಗಿ ಭೇಟಿ ನೀಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಇದೊಂದು ಸೌಜನ್ಯಯುತ ಭೇಟಿಯಾಗಿತ್ತು. ನಾನು ಎಂಎಲ್ಸಿ, ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಆಂತಹ ಯಾವುದೇ ಲಾಭಿಗಾಗಿ ಇಲ್ಲಿ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಮಂಡ್ಯದ ಸಣಬದಹಳ್ಳಿ ಗ್ರಾಮದಲ್ಲಿ ನಡೆದ ಚೆಕ್ ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿದ ರಮ್ಯಾ ಈಗಾಗಲೇ ತಾವು ಸಾಮಾಜಿಕ ಜಾಲ ತಾಣದಲ್ಲಿ ಈ ಸಂಬಂಧ ಸ್ಪಷ್ಟನೆ ನೀಡಿರುವುದಾಗಿ ಹೇಳಿದರು.
Advertisement