ತಿನ್ನೋದು ಗೊತ್ತಿರಲಿಲ್ಲ: ವಿ. ಸುನಿಲ್ ಕುಮಾರ್

ಕುರುಬರು ಕುರಿ ತಿನ್ನುತ್ತಾರೆ ಎಂದು ಕೇಳಿದ್ದೇವೆ. ಆದರೆ, ಗೋಮಾಂಸ ತಿನ್ನುತ್ತಾರೆ ಎಂಬುವುದು ನನಗೆ ತಿಳಿದಿರಲಿಲ್ಲ'...
ವಿ. ಸುನಿಲ್ ಕುಮಾರ್
ವಿ. ಸುನಿಲ್ ಕುಮಾರ್
ಕಾರ್ಕಳ: `ಕುರುಬರು ಕುರಿ ತಿನ್ನುತ್ತಾರೆ ಎಂದು ಕೇಳಿದ್ದೇವೆ. ಆದರೆ, ಗೋ ಮಾಂಸ ತಿನ್ನುತ್ತಾರೆ ಎಂಬುವುದು ನನಗೆ ತಿಳಿದಿರಲಿಲ್ಲ' ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಬಿಜೆಪಿ ವತಿಯಿಂದ ಬಸ್ ನಿಲ್ದಾಣದಲ್ಲಿ ಗೋ ಮಾಂಸದ ಕುರಿತು ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿ ಶನಿವಾರ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿಮಾತನಾಡಿದರು. ಒಬ್ಬ ಮುಖ್ಯಮಂತ್ರಿ ಗೋಮಾಂಸ ತಿನ್ನುತ್ತಾರೆ ಎಂದು ಹೇಳುವುದಾದರೆ ಕಸಾಯಿಖಾನೆಗೆ ಬೆಂಬಲ ನೀಡುತ್ತೇನೆ ಎನ್ನುವ ಅರ್ಥವಾಯಿತು. ಮುಂದಿನವಿಧಾನ ಸಭೆ ಅಧಿವೇಶನ ಈ ಹೇಳಿಕೆಯಮುಖಾಂತರ ಆರಂಭವಾಗುತ್ತದೆ ಎನ್ನುವುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು. ಈ ಹೇಳಿಕೆಯನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com