ಪಕ್ಷದಲ್ಲಿ ಕೆಲವರು ಕಾನೂನು ಹೋರಾಟವನ್ನೂ ಮಾಡಲಿದ್ದಾರೆ. ಈ ಬಗ್ಗೆ ಕಾನೂನು ಪರಿಣಿತರ ಬಳಿ ಚರ್ಚಿಸಲಿದ್ದೇವೆ ಎಂದರು.ಮುಖ್ಯಮಂತ್ರಿಯಾದವರು ಎಲ್ಲ ಸಮಾಜದ, ವರ್ಗದ ನಾಯಕರಾಗಿರುತ್ತಾರೆ. ಇಂತಹ ಹೇಳಿಕೆ ನೀಡಿ, ಒಂದು ವರ್ಗವನ್ನು ಓಲೈಸಿ ಅಧಿಕಾರದಲ್ಲಿ ಮುಂದುವರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯತ್ನಿಸುತ್ತಿದ್ದಾರೆ ಎಂದು ಶೆಟ್ಟರ್ ವ್ಯಂಗ್ಯವಾಡಿದರು.