ಬಿಬಿಎಂಪಿ ಮೇಯರ್ ಚುನಾವಣೆ: ಬಿಜೆಪಿ ಕಾರ್ಪೊರೇಟರ್‌ಗಳಿಂದ ಡಿಕೆಶಿ ಭೇಟಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಪೊರೇಟರ್‌ಗಳಿಬ್ಬರು...
ಡಿಕೆ ಶಿವಕುಮಾರೊಂದಿಗೆ ಬಿಜೆಪಿ ಕಾರ್ಪೊರೇಟರ್ಸ್
ಡಿಕೆ ಶಿವಕುಮಾರೊಂದಿಗೆ ಬಿಜೆಪಿ ಕಾರ್ಪೊರೇಟರ್ಸ್
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಪೊರೇಟರ್‌ಗಳಿಬ್ಬರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಹಂಪಿನಗರ ಕಾರ್ಪೊರೇಟರ್ ಆನಂದ್ ಹೊಸೂರು ಹಾಗೂ ಮಾರೇನಹಳ್ಳಿ ಬಿಜೆಪಿ ಕಾರ್ಪೊರೇಟರ್ ಮಧುಕಮಾರಿ ಪತಿ ವಾಗೀಶ್ ಅವರು ಇಂದು ಬೆಳಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ, ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ವಾಗೀಶ್ ಅವರು, ರಾಜಕೀಯ ಉದ್ದೇಶದಿಂದ ನಾವು ಸಚಿವರನ್ನು ಭೇಟಿಯಾಗಿಲ್ಲ ಮತ್ತು ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚಿಸಿಲ್ಲ. ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚಿಸಲು ತೆರಳಿದ್ದೇವು ಎಂದಿದ್ದಾರೆ.

ಸೆಪ್ಟೆಂಬರ್ 11ರಂದು ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com