ಬೆಂಗಳೂರು: ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನದಂತೆ
ನಿರ್ಧರಿಸಲಾಗಿದೆ. ಅದಕ್ಕೆ ಪಕ್ಷದ ಮುಖಂಡರೆಲ್ಲರೂ ಬದ್ಧ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನೊಂದಿಗಿನ ಮೈತ್ರಿ ಬಗ್ಗೆ ಭಿನ್ನಾಭಿಪ್ರಾಯಗಳಿವೆ ಎಂಬುದು ವದಂತಿಯಷ್ಟೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮೈಸೂರಿನಲ್ಲಿ ಬಿಬಿಎಂಪಿ ಮೈತ್ರಿ ತಮಗೆ ಸೇರಿದ್ದಲ್ಲ, ಅದನ್ನು ಕಾಂಗ್ರೆಸ್ನ ಸ್ಥಳೀಯ ನಾಯಕರೇ ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದರಿಂದ ಯಾರ ಜತೆಗೂ ಮಾತುಕತೆ ಬೇಡ ಎಂದು ಸುಮ್ಮನಾಗಿದ್ದೆ ಎಂದು ತಿಳಿಸಿದರು.
Advertisement