ಲಖನೌ: ಸಂಸತ್ ಅಧಿವೇಶನದ ವೇಳೆ ಗದ್ದಲ ಉಂಟುಮಾಡಿದ್ದ ಕಾಂಗ್ರೆಸ್ ಗೆ ಬೆಂಬಲಿಸದ ಸಮಾಜವಾದಿ ಪಕ್ಷದ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ವ್ಯಕ್ತವಾದ ಪ್ರಶಂಸೆಯನ್ನು ಮುಲಾಯಂ ಸಿಂಗ್ ಸ್ವಾಗತಿಸಿದ್ದಾರೆ.
ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿರುವುದು ಗೌರವ ಸೂಚಕ ಎಂದು ಭಾವಿಸುತ್ತೇನೆ. ಆದರೆ ಏರು ಧ್ವನಿಯಲ್ಲಿ ಸುಳ್ಳು ಹೇಳಿ ಜನತೆಗೆ ಮೋಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಲಾಯಂ ಸಿಂಗ್ ಯಾದವ್ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮುಲಾಯಂ ಸಿಂಗ್ ಯಾದವ್, ಪ್ರಜಾಪ್ರಭುತ್ವವವನ್ನು ಉಳಿಸಲು ಸಮಾಜವಾದಿ ಪಕ್ಷ ಬೆಂಬಲಿಸಿದ್ದಕ್ಕೆ ಮೋದಿ ಪ್ರಶಂಸಿಸಿದ್ದಾರೆ. ಆದರೆ ಮೋದಿ ಸುಳ್ಳು ಹೇಳಿದರೂ ಸಹಿಸುತ್ತೇವೆ ಎಂದು ಇದರ ಅರ್ಥವಲ್ಲ. ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಕಪ್ಪು ಹಣ ವಾಪಸ್ ತಂದು ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಈ ವರೆಗೂ ಅದನ್ನು ಈಡೇರಿಸಿಲ್ಲ. ಜನರು ತಮ್ಮ ಅಭಿವೃದ್ಧಿ ಬಗ್ಗೆ ಯೋಚಿಸದ ಜನಪ್ರತಿನಿಧಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಮುಲಾಯಂ ಸಿಂಗ್ ಕರೆ ನೀಡಿದ್ದಾರೆ.
Advertisement