ಕೋಮು ಶಕ್ತಿಗಳ ಕೈವಾಡ: ಸಿಎಂ

ಹಿರಿಯ ಸಾಹಿತಿ ಡಾ.ಎಂ.ಎಂ. ಕಲಬುರ್ಗಿ ಹತ್ಯೆಯಲ್ಲಿ ಕೋಮುವಾದಿ ಶಕ್ತಿಗಳ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು ಆ ದಿಕ್ಕಿನಲ್ಲೇ ತನಿಖೆ ಸಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ನವದೆಹಲಿ: ಹಿರಿಯ ಸಾಹಿತಿ ಡಾ.ಎಂ.ಎಂ. ಕಲಬುರ್ಗಿ ಹತ್ಯೆಯಲ್ಲಿ ಕೋಮುವಾದಿ ಶಕ್ತಿಗಳ ಕೈವಾಡ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು ಆ ದಿಕ್ಕಿನಲ್ಲೇ ತನಿಖೆ ಸಾಗಿದೆ ಎಂದು ಸಿಎಂ  ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ವಿರುದ್ಧ ಸಾಕ್ಷ್ಯಾಧಾರ ಸಂಗ್ರಹಿಸಲಾಗುತ್ತಿದೆ. ವಿಚಾರಣೆ ಹಂತದಲ್ಲಿದೆ. ಪೂರ್ಣ ಸಾಕ್ಷ್ಯಾಧಾರಗಳು ಸಿಕ್ಕ ನಂತರ ಕ್ರಮ ಕೈಗೊಳ್ಳಲಾಗುತ್ತದೆ  ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿ, ಎಲ್ಲೆಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆಯೋ ಅಲ್ಲೆಲ್ಲ ಕೋಮುವಾದಿ ಶಕ್ತಿಗಳು ಪ್ರಬಲವಾಗಿವೆ, ಅಂತಹ ಕೋಮುವಾದಿ ಶಕ್ತಿಗಳು ಬಾಲ ಬಿಚ್ಚದಂತೆ ನಾವು ನೋಡಿಕೊಳ್ಳುತ್ತೇವೆ ಎಂದರು.

ರಾಯಚೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸಾಹಿತಿಗಳಿಬ್ಬರಿಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಠಾಣೆಗೆ ಕರೆದು ಐಪಿಸಿ 506ರಡಿ ಪ್ರಕರಣ ದಾಖಲಿಸಿ ತಕ್ಷಣ ಬಿಡುಗಡೆ ಮಾಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಆ ಬಗ್ಗೆ ನನಗೂ ವೈಯಕ್ತಿಕವಾಗಿ ಬೇಸರ ಇದೆ. ಬಹಿರಂಗವಾಗಿ ಸಾಹಿತಿಗಳಿಗೆ ಬೆದರಿಕೆ ಹಾಕುವುದನ್ನು ಸಂಘಟಿತ ಅಪರಾಧ ಎಂದು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಸೂಕ್ತ ಪ್ರಕರಣಗಳನ್ನು ದಾಖಲಿಸಬೇಕು ಎಂದು ಗೃಹ ಇಲಾಖೆ ಮತ್ತು ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com