ದಲಿತರು ಸಿಎಂ ಆಗೋ ಕಾಲ ಇನ್ನೂ ಬಂದಿಲ್ಲ: ಪರಮೇಶ್ವರ್

ದಲಿತರು ಮುಖ್ಯಮಂತ್ರಿ ಆಗೋ ವಿಚಾರ ಮತ್ತೆ ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಇನ್ನೂ ಬಂದಿಲ್ಲ...
ಪರಮೇಶ್ವರ್
ಪರಮೇಶ್ವರ್

ಬೆಂಗಳೂರು: ದಲಿತರು ಮುಖ್ಯಮಂತ್ರಿ ಆಗೋ ವಿಚಾರ ಮತ್ತೆ ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಇನ್ನೂ ಬಂದಿಲ್ಲ. ದಲಿತರು ದಲಿತರನ್ನೇ ಆಯ್ಕೆ ಮಾಡುವ ಕಾಲ ಬರಬೇಕಾಗಿದೆ ಎಂದರು.

ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್ ಅವರು, ದಲಿತರಿಗೆ ರಾಜಕೀಯ ಶಕ್ತಿ ಇನ್ನೂ ಬಂದಿಲ್ಲ. ಹಾಗಾಗಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಕೂಡಿ ಬಂದಿಲ್ಲ ಎಂದರು.

ರಾಜ್ಯದಲ್ಲಿ ದಲಿತ ಸಿಎಂ ಕುರಿತಂತೆ ಕೆಲ ತಿಂಗಳುಗಳಿಂದ ತೀವ್ರ ಚರ್ಚೆಯಾಗುತ್ತಿದೆ. ಪರಮೇಶ್ವರ್ ಅವರು ಅವಕಾಶ ಸಿಕ್ಕಿದಾಗಲೆಲ್ಲಾ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸುತ್ತಾ ಬಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com