ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಎರಡನೇ ಪುತ್ರ ಯತೀಂದ್ರ ಸಿದ್ದರಾಮಯ್ಯ ರಾಜಕೀಯಕ್ಕೆ ಬರುವ ಎಲ್ಲಾ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗಿದೆ. ರಾಕೇಶ್ ಸಿದ್ದರಾಮಯ್ಯ ನಿರ್ವಹಿಸುತ್ತಿದ್ದ ಜವಬ್ದಾರಿಯನ್ನ ಯತೀಂದ್ರ ಅವರು ಹೊರಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಯತೀಂದ್ರ ಸಿದ್ದರಾಮಯ್ಯ ಅವರನ್ನ ರಾಜಕೀಯ ಕರೆತರುವ ಪ್ರಯತ್ನ ನಡೆಸಲಾಗಿದೆ. ನಾವು ಈ ಹಂತಕ್ಕೆ ಬರಲು ಅಭಿಮಾನಿಗಳು, ಬೆಂಬಲಿಗರೇ ಕಾರಣ. ಭವಿಷ್ಯದಲ್ಲೂ ಬೆಂಬಲಿಗರು, ಅಭಿಮಾನಿಗಳ ಹಿತ ಕಾಯುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ರಾಜಕೀಯದಿಂದ ದೂರ ಉಳಿಯುವುದು ಸರಿಯಲ್ಲ, ರಾಜಕೀಯಕ್ಕೆ ಬಂದು ಬೆಂಬಲಿಗರು, ಅಭಿಮಾನಿಗಳ ಸೇವೆ ಮಾಡುವಂತೆ ಸಿಎಂ ಕಿವಿಮಾತು ಹೇಳಿದ್ದಾರೆ ಎಂದು ವರದಿಯಾಗಿದೆ.
ವೃತ್ತಿಯಲ್ಲಿ ವೈದ್ಯರಾಗಿರುವ ಯತೀಂದ್ರ ಅವರು ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಆದ್ರೆ ಕಳೆದ ಎರಡು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಕೇಶ್ ಸ್ನೇಹಿತರು ಪಕ್ಷದ ಕೆಲ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
Advertisement