ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯ ಬಿಜೆಪಿ ವಿರುದ್ಧ ಹರಿ ಹಾಯ್ದಿದ್ದಾರೆ.
ದೇಶದ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಬಿಜೆಪಿ ದೇಶದ್ರೋಹ ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ.
ಕೆಲ ಬಿಜೆಪಿ ಮುಖಂಡರು ನೀಡುತ್ತಿರುವ ವಿಲಕ್ಷಣ ವಾದ ಹೇಳಿಕೆಗಳ ವಿರುದ್ಧ ಬೇರೆ ಪಕ್ಷಗಳು ಕೂಡ ದೇಶ ದ್ರೋಹದ ಕೇಸ್ ದಾಖಲಿಸಬಹುದು, ಆದರೆ ಅವರು ಆ ಕೆಲಸ ಮಾಡುತ್ತಿಲ್ಲ ಬದಲಿಗೆ ಚರ್ಚೆಯಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಸದ್ಯ ದೇಶ ದ್ರೋಹ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಲಾಭ ಪಡೆದುಕೊಳ್ಳುತ್ತಿದೆ ಎಂದು ದೂರಿದ್ದಾರೆ.
ಪಾಕಿಸ್ತಾನ ನರಕವಲ್ಲ, ಪಾಕಿಗಳು ಒಳ್ಳೆಯವರು ಎಂದು ಹೇಳುವ ಮೂಲಕ ನಟಿ ರಮ್ಯಾ ವಿವಾದಕ್ಕೆ ಕಾರಣರಾಗಿದ್ದರು. ರಮ್ಯಾ ವಿರುದ್ದ ವಕೀಲ ಕೆ. ವಿಠಲ ಗೌಡ ಎಂಬುವರು ಸೋಮವಾರ ಪೇಟೆ ನ್ಯಾಯಾಲಯದಲ್ಲಿ ದೇಶದ್ರೋಹ ಕೇಸು ದಾಖಲಿಸಿದ್ದಾರೆ.
Advertisement