ನಂಜನಗೂಡು ಉಪಚುನಾವಣೆಗೆ ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಕಣಕ್ಕೆ: ಬಿಎಸ್ ವೈ

ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ...
ಶ್ರೀನಿವಾಸ್ ಪ್ರಸಾದ್ ಮತ್ತು ಯಡಿಯೂರಪ್ಪ
ಶ್ರೀನಿವಾಸ್ ಪ್ರಸಾದ್ ಮತ್ತು ಯಡಿಯೂರಪ್ಪ

ಮೈಸೂರು: ನಂಜನಗೂಡು ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಂಜನಗೂಡಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಂಜನಗೂಡು ವಿಧಾನಸಭೆ ಉಪ ಚುನಾವಣೆ ಮೂಲಕ ಬಿಜೆಪಿ ವಿಜಯ ಯಾತ್ರೆ ಆರಂಭವಾಗಬೇಕೆಂದು ನಾನು ಬಯಸುತ್ತೇನೆ, ಶ್ರೀನಿವಾಸ್ ಪ್ರಸಾದ್ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ, ನಾನೇ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ನೀವು ಭಾವಿಸಿ ಕೆಲಸ ಮಾಡಬೇಕು, ಭಾರೀ ಮತಗಳ ಅಂತರದಿಂದ ಶ್ರೀನಿವಾಸ್ ಪ್ರಸಾದ್ ಜಯಗಳಿಸಬೇಕು ಎಂದು ಯಡಿಯೂರಪ್ಪ ಕರೆ ನೀಡಿದ್ದರು.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಮಾಜಿ ಮಂತ್ರಿಗಳಾದ ಡಿ.ಟಿ.ಜಯ ಕುಮಾರ್ ಮತ್ತು ಎಂ. ಮಹಾದೇವ ಶ್ರೀಕಂಠೇಶ್ವರ ದೇವಾಲಯವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯ ಕೆಲವರಲ್ಲಿ ಸಣ್ಣಪುಟ್ಟ ಭಿನ್ನಾಬಿಪ್ರಾಯಗಳಿವೆ. ಆದರೆ ಅದೆಲ್ಲವನ್ನು ಮೆಟ್ಟಿ ನಿಂತು 2018 ರ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಜಯಗಳಿಸುವುದರ ಕಡೆ ನಾವು ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com