‘ಜನಾರ್ದನ ಪೂಜಾರಿ ಹಾಗೂ ಎಸ್.ಎಂ.ಕೃಷ್ಣ ಅವರಿಗೆ ವಯಸ್ಸಿನ ದೋಷವಿದ್ದು, ಅವರ ಮಾತಿಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ’ ಎಂಬ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಪೂಜಾರಿ, ನನ್ನ ಬಾಯಿಗೆ ಕೋಲು ಹಾಕಬೇಡಿ ಎಂದು ಹಿಂದೆಯೇ ಹೇಳಿದ್ದೆ. ನಿಮ್ಮ ಬಗ್ಗೆ ಹೇಳಲು ಸಾಕಷ್ಟಿದೆ. ಚುನಾವಣೆ ಮುಗಿದ ಮೇಲೆ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದು ಎಚ್ಚರಿಸಿದರು. ನಾನಾಗಲೀ, ಎಸ್.ಎಂ.ಕೃಷ್ಣ ಹೇಳಿರುವುದರಲ್ಲಿ ತಪ್ಪೇನಿದೆ? ಮೊಯ್ಲಿ ಪಕ್ಷವನ್ನು ಮುಗಿಸಲು ಹೊರಟಿದ್ದಾರೆಯೇ ಎಂದು ಪ್ರಶ್ನಿಸಿದರು.