ಮೂರು ಕ್ಷೇತ್ರಗಳಲ್ಲೂ ಠೇವಣಿ ಕಳೆದುಕೊಂಡ ಜೆಡಿಎಸ್!

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಳ್ಳುವ ಮೂಲಕ ಮೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ಹೀನಾಯವಾದ ಸೋಲು ಅನುಭವಿಸಿದೆ....
ಎಚ್. ಡಿ ದೇವೇಗೌಡ
ಎಚ್. ಡಿ ದೇವೇಗೌಡ

ಬೆಂಗಳೂರು: ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಪ್ರತಿಷ್ಠೆಯ ಕಣವಾಗಿದ್ದ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ನಗು ಬೀರಿದ್ದು, ಮೂರು ಕ್ಷೇತ್ರಗಳಲ್ಲಿ ಎರಡು ಬಿಜೆಪಿ ಹಾಗೂ ಒಂದು ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಜೆಡಿಎಸ್ ಎಲ್ಲೂ ಖಾತೆ ತೆರೆಯದೆ ವಿಫಲವಾಗಿದೆ.

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಠೇವಣಿ ಕಳೆದುಕೊಳ್ಳುವ ಮೂಲಕ ಮೂರು ವಿಧಾನ ಸಭೆ ಕ್ಷೇತ್ರಗಳಲ್ಲಿ ಹೀನಾಯವಾದ ಸೋಲು ಅನುಭವಿಸಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆಗೆ ಮಣೆ ಹಾಕದ ಮತದಾರ, ಜೆಡಿಎಸ್ ಅಭ್ಯರ್ಥಿಗಳನ್ನು ಠೇವಣಿ ಇಲ್ಲದಂತೆ ಸೋಲಿಸಿದ್ದಾರೆ.

ಹೆಬ್ಬಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಇಸ್ಮಾಯಿಲ್ ಷರೀಫ್ ಕೇವಲ 3,666 ಮತ ಗಳಿಸಿದ್ದರೆ, ಬೀದರ್ ನಲ್ಲಿ ಅಯಾಜ್ ಖಾನ್ 4, 421 ಹಾಗೂ ದೇವದುರ್ಗದಲ್ಲಿ ಕರಿಯಮ್ಮ 9, 156 ಮತಗಳನ್ನ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com